ಮನಮೋಹನ್ ಸಿಂಗ್- ವಿಧಾನಸೌಧ online desk
ರಾಜ್ಯ

Former PM Manmohan Singh Passes Away: ರಾಜ್ಯದಲ್ಲಿ 7 ದಿನ ಶೋಕಾಚರಣೆ, ಡಿ.27 ರಂದು ಸರ್ಕಾರಿ ಶಾಲೆಗಳಿಗೆ ರಜೆ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ.

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ. ಡಿ.27 ರಂದು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಸಿಎಂ ಕಚೇರಿಯ ಹೇಳಿಕೆ ಮೂಲಕ ತಿಳಿದುಬಂದಿದೆ.

ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ ಎಂದು ಹೇಳಿದ್ದಾರೆ.

ಮಾತಿಗಿಂತ ಕೃತಿ‌ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ನುಡಿಗಳಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT