ಸೋನಿಯಾ ಗಾಂಧಿ 
ರಾಜ್ಯ

ಬೆಳಗಾವಿ ಕಾಂಗ್ರೆಸ್ ಅಧಿವೇಶನ: ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ; ಪತ್ರದ ಮೂಲಕ ಸೋನಿಯಾ ಮಹತ್ವದ ಕರೆ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 39 ನೇ ಅಧಿವೇಶನವು ನಿಖರವಾಗಿ ನೂರು ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ (ಬೆಳಗಾವಿಯ ವೀರ ಸೌಧ) ನಡೆದಿತ್ತು, "ಆದ್ದರಿಂದ ನೀವು ಬೆಳಗಾವಿ ನಗರದಲ್ಲಿ ಸಮಾವೇಶಗೊಂಡಿರುವುದು ಸೂಕ್ತವಾಗಿದೆ.

ಬೆಂಗಳೂರು: 1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ಐತಿಹಾಸಿಕ CWC ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದಕ್ಕೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಿಷಾದ ವ್ಯಕ್ತಪಡಿಸಿದ್ದಾರೆ.

ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿಡಬ್ಲ್ಯುಸಿ ಸದಸ್ಯರಿಗೆ ಅವರು ಪತ್ರ ಬರೆದಿದ್ದಾರೆ. ‘‘ಈ ಐತಿಹಾಸಿಕ ಸಂದರ್ಭದಲ್ಲಿ ನಿಮ್ಮೆಲ್ಲರೊಂದಿಗೆ ಇರಲು ಸಾಧ್ಯವಾಗುತ್ತಿಲ್ಲ ಎಂದು ವಿಷಾದಿಸುತ್ತೇನೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 39 ನೇ ಅಧಿವೇಶನವು ನಿಖರವಾಗಿ ನೂರು ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ (ಬೆಳಗಾವಿಯ ವೀರ ಸೌಧ) ನಡೆದಿತ್ತು, "ಆದ್ದರಿಂದ ನೀವು ಬೆಳಗಾವಿ ನಗರದಲ್ಲಿ ಸಮಾವೇಶಗೊಂಡಿರುವುದು ಮಾತ್ರ ಸೂಕ್ತವಾಗಿದೆ.

ಗಾಂಧೀಜಿ ಇದೇ ಸ್ಥಳದಲ್ಲಿ ಅಧ್ಯಕ್ಷರಾಗಿರುವುದಕ್ಕೆ ನಮ್ಮ ಪಕ್ಷಕ್ಕೆ ಹಾಗೂ ಸ್ವಾತಂತ್ರ್ಯ ಚಳವಳಿಗೆ ಮಹತ್ವದ ತಿರುವು ನೀಡಿದೆ. ಇದು ನಮ್ಮ ದೇಶದ ಇತಿಹಾಸದಲ್ಲಿ ಪರಿವರ್ತನೆಯ ಮೈಲಿಗಲ್ಲು.ದೆಹಲಿಯಲ್ಲಿ ಅಧಿಕಾರದಲ್ಲಿ ಇರುವವರಿಂದ ಗಾಂಧೀಜಿ ತತ್ವ ಸಿದ್ಧಾಂತಗಳಿಗೆ ಬೆದರಿಕೆ ಇದೆ. ಅಧಿಕಾರದಲ್ಲಿರುವ ಸಂಘಟನೆಗಳು ಎಂದೂ ಸ್ವಾತಂತ್ರ್ಯಕ್ಕಾಗಿ ಎಂದೂ ಹೋರಾಟ ಮಾಡಲಿಲ್ಲ.. ಅಲ್ಲದೇ ಮಹಾತ್ಮ ಗಾಂಧೀಜಿ ಅವರನ್ನ ಕಟುವಾಗಿ ವಿರೋಧಿಸಿದವರು, ಗಾಂಧೀಜಿ ಹತ್ಯೆ ಮಾಡಿದವರನ್ನ ಸಂಭ್ರಮಿಸಿದವರು.

ದೇಶದ ವಿವಿಧೆಡೆ ಗಾಂಧಿ ಸಂಘ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದ್ದು, ಇಂದು ನಡೆಯುತ್ತಿರುವ ಸಭೆಯನ್ನ ನವ ಸತ್ಯಾಗ್ರಹ ಬೈಠಕ್ ಎಂದು ಕರೆದಿರುವುದು ಸೂಕ್ತವಾಗಿದೆ. ಅಂತಹ ಶಕ್ತಿಗಳ ವಿರುದ್ಧ ರಾಜಿಯಾಗದೇ ಹೋರಾಟ ನಡೆಸುವ ನಿರ್ಣಯ ಮಾಡುವುದು ಸಂಕಲ್ಪ ಮತ್ತು ಕರ್ತವ್ಯ. ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಕರೆ ನೀಡಿದ್ದಾರೆ. ಅಂತಹ ಶಕ್ತಿಗಳ ವಿರುದ್ಧ ರಾಜಿಯಾಗದೇ ಹೋರಾಟ ನಡೆಸುವ ನಿರ್ಣಯ ಮಾಡುವುದು ಸಂಕಲ್ಪ ಮತ್ತು ಕರ್ತವ್ಯ. ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಪತ್ರದ ಮೂಲಕ ಕರೆ ಕೊಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT