ಸಿದ್ದರಾಮಯ್ಯ-ಸ್ನೇಹಮಯಿ ಕೃಷ್ಣ PTI
ರಾಜ್ಯ

ಸಿಎಂ ವಿರುದ್ಧದ ಹೋರಾಟ: ಬೆದರಿಕೆ ಹಿನ್ನೆಲೆ ಭದ್ರತೆ ಕೋರಿ ಮೋದಿ, ಅಮಿತ್ ಶಾಗೆ RTI ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಪತ್ರ!

ಮುಡಾ ಅಡಿಯಲ್ಲಿ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ರಾಜಕೀಯ ಪ್ರಭಾವ ಬಳಸಿ ಹಂಚಿಕೆ ಮಾಡಲಾಗಿದೆ ಎಂದು ದೂರು ಸಲ್ಲಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಮುಡಾ ಹಗರಣ ಸಂಬಂಧ ದೂರು ನೀಡಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ತಮಗೆ ಬೆದರಿಕೆ ಹಾಕಲಾಗುತ್ತಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಇನ್ನು ತಮ್ಮ ಕುಟುಂಬಕ್ಕೆ ಭದ್ರತೆ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ ಕೇಂದ್ರದಿಂದ ಭದ್ರತೆ ಒದಗಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಡಿಯಲ್ಲಿ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ರಾಜಕೀಯ ಪ್ರಭಾವ ಬಳಸಿ ಹಂಚಿಕೆ ಮಾಡಲಾಗಿದೆ ಎಂದು ದೂರು ಸಲ್ಲಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ. ಮೊದಲಿಗೆ ಈ ಸಂಬಂಧ ಅಧಿಕಾರಿಗಳಿಗೆ ದೂರು ನೀಡಲು ಪ್ರಯತ್ನಿಸಿದರೂ ಅವರು ಕ್ರಮಕ್ಕೆ ಮುಂದಾಗಲಿಲ್ಲ. ಹೀಗಾಗಿ ನಾನು ನ್ಯಾಯಾಲಯದ ಮೊರೆ ಹೋಗಿ ಖಾಸಗಿ ದೂರು ಸಲ್ಲಿಸಿದೆ. ನನ್ನ ದೂರು ಮತ್ತು ಪೂರಕ ದಾಖಲೆಗಳನ್ನು ಪರಿಶೀಲಿಸಿದ ನಂತರ ನ್ಯಾಯಾಲಯವು ಲೋಕಾಯುಕ್ತ ಅಧಿಕಾರಿಗಳ ತನಿಖೆಗೆ ಸೂಚಿಸಿತು. ಇದರ ನಂತರ, ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ಎಫ್ಐಆರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆರೋಪಿ ನಂ 1 ಎಂದು ಹೆಸರಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮುಡಾ ಹಗರಣವನ್ನು ಬಹಿರಂಗಪಡಿಸಿದ ಕಾರಣ ತಮ್ಮ ವಿರುದ್ಧ ಅನೇಕ ಸುಳ್ಳು ಎಫ್‌ಐಆರ್‌ಗಳನ್ನು ದಾಖಲಿ, ಜೈಲಿಗಟ್ಟಲು ಪ್ರಯತ್ನಿಸಲಾಗಿದೆ ಎಂದು ಆರ್‌ಟಿಐ ಕಾರ್ಯಕರ್ತ ಆರೋಪಿಸಿದ್ದಾರೆ. ತಮ್ಮ ವಿರುದ್ಧ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿದ್ದು, ನಂತರ ದೇವರಾಜ ಪೊಲೀಸ್ ಠಾಣೆ ಮತ್ತು ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ಮೂಲಕ ನನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ ಪ್ರಕರಣವನ್ನು ಕೈಬಿಡಲು ಹಣದ ಆಮಿಷ ಒಡ್ಡುತ್ತಿದ್ದಾರೆ. ಆದರೆ ನಾನು ಹೋರಾಟವನ್ನು ಮುಂದುವರಿಸಲು ನಿರ್ಧರಿಸಿದ್ದೇನೆ. ಈಗ ಅವರು ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆ ಹಾಕುತ್ತಿದ್ದಾರೆ ಎಂದು ಕೃಷ್ಣ ಆರೋಪಿಸಿದ್ದಾರೆ. 2024ರ ಆಗಸ್ಟ್ 18ರಂದು ಮೈಸೂರಿನ ಪೊಲೀಸ್ ಕಮಿಷನರ್‌ಗೆ ಗನ್‌ಮ್ಯಾನ್‌ಗಾಗಿ ಮನವಿ ಸಲ್ಲಿಸಿದ್ದೆ ಆದರೆ ಅದನ್ನು ತಿರಸ್ಕರಿಸಲಾಗಿದೆ ಎಂದರು.

ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಹಲವಾರು ಎನ್‌ಜಿಒಗಳು ಮತ್ತು ಸಂಘಟನೆಗಳೂ ಸಹ ಕರ್ನಾಟಕದ ಡಿಜಿಪಿ ಅವರಿಗೆ ಭದ್ರತಾ ನೆರವು ನೀಡುವಂತೆ ಪತ್ರಗಳನ್ನು ಕಳುಹಿಸಿದ್ದರೂ ಆ ಮನವಿಯನ್ನು ಸಹ ನಿರಾಕರಿಸಲಾಗಿದೆ. ನಾನು ಮುಖ್ಯಮಂತ್ರಿ ಮತ್ತು ಇತರ ಪ್ರಭಾವಿ ವ್ಯಕ್ತಿಗಳ ವಿರುದ್ಧ ಹೋರಾಡುತ್ತಿರುವುದರಿಂದ ರಾಜ್ಯ ಸರ್ಕಾರ ನನಗೆ ಭದ್ರತೆ ನೀಡಲು ನಿರಾಕರಿಸುತ್ತಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಭಾವದಿಂದ ಸರ್ಕಾರಿ ಅಧಿಕಾರಿಗಳು ನನ್ನ ಪ್ರಯತ್ನಕ್ಕೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ಕಾಣುತ್ತಿದೆ.

ರಾಜ್ಯ ಸರ್ಕಾರದ ಭದ್ರತೆಯನ್ನು ತೆಗೆದುಕೊಂಡರೆ ನನಗೆ ಮತ್ತು ನನ್ನ ಕುಟುಂಬಕ್ಕೆ ಹೆಚ್ಚು ಅಪಾಯಕಾರಿ ಎಂದು ತೋರುತ್ತದೆ. ಆದ್ದರಿಂದ, ನನ್ನ ಜೀವವನ್ನು ರಕ್ಷಿಸಲು ಮತ್ತು ನನ್ನ ಕುಟುಂಬದ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ಭದ್ರತೆಯನ್ನು ಒದಗಿಸಬೇಕೆಂದು ನಾನು ವಿನಮ್ರತೆಯಿಂದ ವಿನಂತಿಸುತ್ತೇನೆ ಎಂದು ಕೃಷ್ಣ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT