ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ಬಿನ್ನಿಮಿಲ್ ರೈಲ್ವೇ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಯುವಕರು ದಾರುಣ ಸಾವು

ಬುಧವಾರ ರಾತ್ರಿ ಬಿನ್ನಿಪೇಟೆ ರೈಲ್ವೆ ಗೇಟ್ ಬಳಿ (ಕೆಎಸ್‌ಆರ್ ಬೆಂಗಳೂರು ಸಿಟಿ ಜಂಕ್ಷನ್‌ನಿಂದ 3 ಕಿ.ಮೀ) ಇಬ್ಬರೂ ಯುವಕರು ಹಳಿ ದಾಟುತ್ತಿದ್ದರು.

ಬೆಂಗಳೂರು: ಮೆಜೆಸ್ಟಿಕ್ ಬಳಿಯ ಬಿನ್ನಿಮಿಲ್ ರೈಲ್ವೇ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಬುಧವಾರ ರಾತ್ರಿ ನಡೆದಿದೆ.

ಮಡತರನ್ನು ಕೇತನ್ ಮಣಿಕಂಠನ್ (23 ವರ್ಷ), ಶರತ್ ಕಣ್ಣನ್ ರವಿ (27) ಎಂದು ಗುರುತಿಸಲಾಗಿದೆ.

ಬುಧವಾರ ರಾತ್ರಿ ಬಿನ್ನಿಪೇಟೆ ರೈಲ್ವೆ ಗೇಟ್ ಬಳಿ (ಕೆಎಸ್‌ಆರ್ ಬೆಂಗಳೂರು ಸಿಟಿ ಜಂಕ್ಷನ್‌ನಿಂದ 3 ಕಿ.ಮೀ) ಇಬ್ಬರೂ ಯುವಕರು ಹಳಿ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ರೈಲ್ವೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇತನ್ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೆ, ಶರತ್ ಫ್ಲಿಪ್‌ಕಾರ್ಟ್‌ನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಹಳಿ ಮೇಲೆ ಯುವಕರು ವಾಕಿಂಗ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ರಾತ್ರಿ 9.20ರ ಸುಮಾರಿಗೆ ನನಗೆ ಮಾಹಿತಿ ಬಂದಿತ್ತು. ಯಾವ ರೈಲು ಡಿಕ್ಕಿ ಹೊಡೆದಿದೆ ಎಂಬುದು ತಿಳಿದುಬಂದಿಲ್ಲ ಗೇಟ್ ಮ್ಯಾನ್ ಹೇಳಿದ್ದಾರೆ.

ಅಸ್ವಾಭಾವಿಕ ಸಾವಿನ ಕುರಿತು ಬಿಎನ್‌ಎಸ್‌ನ ಸೆಕ್ಷನ್ 194 ರ ಅಡಿಯಲ್ಲಿ ಎಫ್‌ಐಆರ್ ಅನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳಉ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT