ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪಿಟ್ ಬುಲ್ ಶ್ವಾನ ದಾಳಿ; 2 ವರ್ಷದ ಬಾಲಕಿಗೆ ಗಂಭೀರ ಗಾಯ; ಮಾಲೀಕರ ವಿರುದ್ಧ ದೂರು ದಾಖಲು

ಅನುಷ್ಕಾ ಧಮಾಲ್ ಎಂಬ ಬಾಲಕಿ ತನ್ನ ತಾಯಿಯೊಂದಿಗೆ ಇದ್ದಾಗ ನೆರೆಹೊರೆಯವರ ನಾಯಿ ಆಕೆಯ ಮೇಲೆ ದಾಳಿ ಮಾಡಿ, ಆಕೆಯ ಭುಜವನ್ನು ತೀವ್ರವಾಗಿ ಕಚ್ಚಿದೆ. ಬಾಲಕಿಯ ತಾಯಿ ನಾಯಿಯನ್ನು ದೂರ ತಳ್ಳಿ ಮಗಳನ್ನು ರಕ್ಷಿಸಲು ಹರಸಾಹಸ ಪಟ್ಟಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಐಟಿಸಿ ರಸ್ತೆಯ ಸುಬ್ಬಣ್ಣಪಾಳ್ಯದಲ್ಲಿ ಸೋಮವಾರ ಸಂಜೆ ಪಿಟ್‌ಬುಲ್ ದಾಳಿಗೆ ಎರಡು ವರ್ಷದ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಾಳೆ.

ಅನುಷ್ಕಾ ಧಮಾಲ್ ಎಂಬ ಬಾಲಕಿ ತನ್ನ ತಾಯಿಯೊಂದಿಗೆ ಇದ್ದಾಗ ನೆರೆಹೊರೆಯವರ ನಾಯಿ ಆಕೆಯ ಮೇಲೆ ದಾಳಿ ಮಾಡಿ, ಆಕೆಯ ಭುಜವನ್ನು ತೀವ್ರವಾಗಿ ಕಚ್ಚಿದೆ. ಬಾಲಕಿಯ ತಾಯಿ ನಾಯಿಯನ್ನು ದೂರ ತಳ್ಳಿ ಮಗಳನ್ನು ರಕ್ಷಿಸಲು ಹರಸಾಹಸ ಪಟ್ಟಿದ್ದಾರೆ ಎನ್ನಲಾಗಿದೆ.

ಸುಬ್ಬಣ್ಣಪಾಳ್ಯದ ವೆಂಕಟೇಶ್ವರ ಲೇಔಟ್ ನಿವಾಸಿಯಾಗಿರುವ ಬಾಲಕಿಯ ತಂದೆ ನಬರಾಜ್ ಧಮಾಲ್ ಅವರು ನಾಯಿಯ ಮಾಲೀಕರ ವಿರುದ್ಧ ಮರುದಿನ ದೂರು ದಾಖಲಿಸಿದ್ದಾರೆ. ಎರಡು ತಿಂಗಳ ಹಿಂದಷ್ಟೇ ನಬರಾಜ್ ಕುಟುಂಬ ನೇಪಾಳದಿಂದ ನಗರಕ್ಕೆ ಆಗಮಿಸಿತ್ತು. ನಬರಾಜ್ ಮತ್ತು ಅವರ ಪತ್ನಿ ಹತ್ತಿರದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದು ಅನುಷ್ಕಾ ಜೊತೆಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಚಿಕಿತ್ಸೆ ವೆಚ್ಚವನ್ನು ನಾಯಿ ಮಾಲೀಕರು ನೋಡಿಕೊಳ್ಳದ ಕಾರಣ ನಬರಾಜ್ ಪೊಲೀಸ್ ದೂರು ದಾಖಲಿಸಿದ್ದಾರೆ. ಬಾಲಕಿ ಅಪಾಯದಿಂದ ಪಾರಾಗಿದ್ದಾಳೆ ಎಂದು ಹೇಳಲಾಗಿದೆ. ಆಕೆ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾಳೆ. ನಾಯಿ ಮಾಲೀಕರನ್ನು ವಿಚಾರಣೆಗೆ ಕರೆಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ನಾಯಿ ಮಾಲೀಕರ ವಿರುದ್ಧ ಪ್ರಾಣಿಗಳಿಗೆ (BNS 291) ಸಂಬಂಧಿಸಿದಂತೆ ನಿರ್ಲಕ್ಷ್ಯ ವರ್ತನೆಯ ಪ್ರಕರಣವನ್ನು ದಾಖಲಿಸಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT