ಅಖಿಲ ಹವ್ಯಕ ಮಹಾಸಭಾ 81‌ ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಮೂರು ದಿನದ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಉದ್ಘಾಟನೆ  
ರಾಜ್ಯ

ಅಡಕೆ ಬೆಳೆಗಾರರ ರಕ್ಷಣೆಗೆ ಸರ್ಕಾರ ಬದ್ಧ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಒಂದು ಕಾಲದಲ್ಲಿ ಆಮದು ಎನ್ನುತ್ತಿದ್ದ ಭಾರತದಲ್ಲಿ ಇಂದು ಮೊಬೈಲ್ ನಿಂದ ಹಿಡಿದು ರಕ್ಷಣಾ ಸಾಧನದವರೆಗೆ ರಫ್ತಿನ ಕೇಂದ್ರವಾಗಿ ಬೆಳೆಯುತ್ತಿದೆ.

ಬೆಂಗಳೂರು: ಹವ್ಯಕ ಬ್ರಾಹ್ಮಣ ಸಮಾಜ ಮೂಲತಃ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಮಂದಿ. ನನ್ನ ಬಳಿ ಪ್ರಮುಖವಾಗಿ ಅಡಕೆ ಸಂಬಂಧಿತ ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಾರೆ. ಅಡಕೆ ಕೇವಲ ಎಲೆ ಅಡಕೆಯಾಗಿ ತಿನ್ನಲು ಮಾತ್ರ ಬಳಕೆಯಾಗದೆ ಮದುವೆಯಿಂದ ಹಿಡಿದು ಶ್ರಾದ್ಧದವರೆಗೆ ಉಪಯೋಗವಾಗಿದೆ. ಅನೇಕ ರೀತಿಯ ವ್ಯತಿರಿಕ್ತ ವರದಿಗಳು ಅಡಕೆ ಬಗ್ಗೆ ಬಂದರೂ ಸಹ ಭಾರತ ಸರ್ಕಾರದ ಮಂತ್ರಿಯಾಗಿ ಅಡಕೆ ಬೆಳೆಗಾರರ ಯಾವುದೇ ಸಮಸ್ಯೆಗಳಿಗೆ ನಾವು ಜೊತೆಯಾಗಿ ಇರುತ್ತೇವೆ ಎಂದು ಭರವಸೆ ನೀಡುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಅಖಿಲ ಹವ್ಯಕ ಮಹಾಸಭಾ 81‌ ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಮೂರು ದಿನದ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಒಟ್ಟು ಹಿಂದೂ ಸಮಾಜವನ್ನು ನಾವು ಜೊತೆಯಾಗಿ ತೆಗೆದುಕೊಂಡು ಹೋಗಬೇಕಿದೆ. ಇಂದು ಭಾರತ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಒಂದು ಕಾಲದಲ್ಲಿ ಫ್ರೆಜೈಲ್ 5 ಎನ್ನುತ್ತಿದ್ದ ಆರ್ಥಿಕತೆ ಒಡೆದು ಹೋಗಬಹುದಾಗಿದ್ದ ಆರ್ಥಿಕತೆ ಸ್ಥಿತಿಯಿಂದ ಇಂದು ಜಗತ್ತಿನಲ್ಲಿ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯ ದೇಶವಾಗಿ ಇವತ್ತು ಹೊರಹೊಮ್ಮಿದೆ.

ಒಂದು ಕಾಲದಲ್ಲಿ ಆಮದು ಎನ್ನುತ್ತಿದ್ದ ಭಾರತದಲ್ಲಿ ಇಂದು ಮೊಬೈಲ್ ನಿಂದ ಹಿಡಿದು ರಕ್ಷಣಾ ಸಾಧನದವರೆಗೆ ರಫ್ತಿನ ಕೇಂದ್ರವಾಗಿ ಬೆಳೆಯುತ್ತಿದೆ. ಒಂದು ಕಾಲದಲ್ಲಿ ರಫ್ತಿನ ಕೇಂದ್ರ ಚೀನಾ ಎಂದು ಹೇಳುತ್ತಿದ್ದಲ್ಲಿ ಇಂದು ಭಾರತ ಅದನ್ನು ಹಿಂದಿಕ್ಕುವ ಸಾಧನೆ ತೋರಿಸುತ್ತಿದೆ. ಕೋವಿಡ್ ನಂತರ ಭಾರತದ ಆರ್ಥಿಕತೆಯ ಪುನರುತ್ಥಾನದ ಬಗ್ಗೆ ಜಗತ್ತು ಆಸಕ್ತಿಯಿಂದ ನೋಡುತ್ತಿದೆ ಎಂದರು.

ಉದ್ಯೋಗ ಬಯಸುವವರಿಗಿಂತ ನೀಡುವವರಾಗಿ: ಇಂದಿನ ಜನಾಂಗದ ಭಾರತೀಯರು ಎಲ್ಲಾ ಕ್ಷೇತ್ರದಲ್ಲಿಯೂ ಸಾಧನೆ ತೋರಿಸುತ್ತಿದ್ದಾರೆ. ಸ್ವಾವಲಂಬಿಗಳಾಗುತ್ತಿದ್ದಾರೆ. ಹೀಗಿರುವಾಗ ನಾವು ಉದ್ಯೋಗ ಬಯಸುವವರಾಗುವುದಕ್ಕಿಂತ ಉದ್ಯೋಗ ನೀಡುವವರಾಗಿ ಬದಲಾಗಬೇಕು.

ಕಾರ್ಯಕ್ರಮದಲ್ಲಿ ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ರಾಘವೇಶ್ವರಭಾರತೀ ಮಹಾಸ್ವಾಮಿಗಳು, ಮಂತ್ರಾಲಯದ ಶ್ರೀರಾಘವೇಂದ್ರ ಮಠದ ಪರಮಪೂಜ್ಯ ಸುಬುಧೇಂದ್ರ ತೀರ್ಥ ಮಹಾಸ್ವಾಮಿಗಳು ಹಾಗೂ ಆದಿಚುಂಚನಗಿರಿ ಮಠದ ಸೌಮ್ಯನಾಥ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಗೌರವಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಡಾ ಅಶ್ವತ್ಥನಾರಾಯಣ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹವ್ಯಕ ಸಮುದಾಯ ಕ್ಷೀಣಿಸುತ್ತಿದೆ: ಬ್ರಾಹ್ಮಣ ಸಮುದಾಯದಲ್ಲಿ ಹವ್ಯಕ ಪಂಗಡದವರ ಸಂಖ್ಯೆ ಕ್ಷೀಣಿಸುತ್ತಿದೆ. ಪೀಠಕ್ಕೆ ಬಂದ 30 ವರ್ಷಗಳ ಹಿಂದೆ ಇದ್ದ ಹವ್ಯಕ ಸಮುದಾಯದವರ ಸಂಖ್ಯೆ ಈಗ ಅರ್ಧಕ್ಕಿಂತ ಕಡಿಮೆಯಾಗಿದೆ. ಇಂದಿನ ಯುವಜನಾಂಗ ಮದುವೆ, ಮಕ್ಕಳೆಂಬ ಜವಾಬ್ದಾರಿ ಹೊಂದುವುದರಿಂದ ವಿಮುಖರಾಗುತ್ತಿದ್ದಾರೆ. ಹಿಂದಿನ ಕಾಲದಲ್ಲಿ ಮಕ್ಕಳು ಹೊಂದುವುದು ಖುಷಿಯ ವಿಚಾರವಾಗಿದ್ದರೆ ಇಂದು ಹೊರೆ ಎಂದು ಭಾವಿಸುತ್ತಾರೆ. ಇಂತಹ ಆಲೋಚನೆ ಸಮಾಜದ ಬೆಳವಣಿಗೆಗೆ ಉತ್ತಮವಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಶಂಕರಾಚಾರ್ಯ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಖೇದ ವ್ಯಕ್ತಪಡಿಸಿದರು.

ಅಪರೂಪದ ಗೋತಳಿಗಳನ್ನು ಉಳಿಸುವ ಅಭಿಯಾನದಂತೆ ಹವ್ಯಕ ಸಮುದಾಯಗಳನ್ನು ಉಳಿಸುವ ಅಭಿಯಾನವನ್ನು ಆರಂಭಿಸುತ್ತೇವೆ. ಅನೇಕ ಮಕ್ಕಳನ್ನು ಹೆತ್ತ ತಾಯಿಗೆ ಕಂಚಿ ಆಚಾರ್ಯರು ವೀರಮಾತ ಎಂಬ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು. ಅದೇ ರೀತಿ ಹವ್ಯಕ ಮಠದಲ್ಲಿಯೂ ಇನ್ನು ಆರಂಭಿಸಲಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT