ಸಾಕು ನಾಯಿ ನೀಮೊ 
ರಾಜ್ಯ

ಪ್ರೀತಿಯ ಸಾಕು ನಾಯಿ 'ನೀಮೋ' ನಿಧನ; ಭಾವನಾತ್ಮಕ ಪತ್ರ ಹಂಚಿಕೊಂಡ ಗೀತಾ ಶಿವರಾಜ್‌ಕುಮಾರ್

ನಾವು ಅಮೆರಿಕಕ್ಕೆ ತೆರಳಿದ ಬಳಿಕವೇ ತಾನು ಹೊರಡಬೇಕೆಂದು ನೀಮೋ ನಿರ್ಧಾರ ಮಾಡಿದ್ದ ಎನಿಸುತ್ತದೆ ಎಂದು ಗೀತಾ ನೋವು ತೋಡಿಕೊಂಡಿದ್ದಾರೆ.

ಬೆಂಗಳೂರು: ನಿಯತ್ತಿಗೆ ಮತ್ತೊಂದು ಹೆಸರೇ ನಾಯಿ ಎಂಬ ಮಾತು ಸಾಮಾನ್ಯವಾಗಿ ಕೇಳಿಯೇ ಇರುತ್ತೇವೆ. ಅದರಲ್ಲೂ ಸಾಕು ನಾಯಿಯ ನಿಯತ್ತಿಗೆ ಸೋಲದ ಮನುಷ್ಯರೇ ಇಲ್ಲ ಎಂದರೂ ತಪ್ಪಾಗಲಾರದು. ಪ್ರೀತಿಯಿಂದ ಸಾಕಿದ ನಾಯಿ ನಿಧನ ಹೊಂದಿದರೆ ಅದರಿಂದಾಗುವ ನೋವನ್ನು ಮಾತುಗಳಲ್ಲಿ ಹೇಳಲು ಸಾಧ್ಯವೇ ಇಲ್ಲ. ಇಂತದ್ದೇ ಪರಿಸ್ಥಿತಿ ನಟ ಶಿವರಾಜ್‌ಕುಮಾರ್ ಅವರ ಕುಟುಂಬಕ್ಕೆ ಒದಗಿಬಂದಿದೆ.

ನಟ ಶಿವರಾಜಕುಮಾರ್ ಮನೆಯಲ್ಲಿ ಸಾಕಿದ್ದ ನೀಮೋ ಹೆಸರಿನ ಶ್ವಾನ ನಿಧನವಾಗಿದ್ದು, ಗೀತಾ ಶಿವರಾಜ್‌ಕುಮಾರ್ ಭಾವನಾತ್ಮಕ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ನಾವು ಅಮೆರಿಕಕ್ಕೆ ತೆರಳಿದ ಬಳಿಕವೇ ತಾನು ಹೊರಡಬೇಕೆಂದು ನೀಮೋ ನಿರ್ಧಾರ ಮಾಡಿದ್ದ ಎನಿಸುತ್ತದೆ ಎಂದು ಗೀತಾ ನೋವು ತೋಡಿಕೊಂಡಿದ್ದಾರೆ.

ಕ್ಯಾನ್ಸರ್ ಚಿಕಿತ್ಸೆಗಾಗಿ ಶಿವಣ್ಣ ದಂಪತಿ ಸದ್ಯ ಅಮೆರಿಕಕ್ಕೆ ತೆರಳಿದ್ದು, ಶಸ್ತ್ರಚಿಕಿತ್ಸೆ ಬಳಿಕ ಅಲ್ಲಿಯೇ ಇದ್ದಾರೆ. ಈ ಹೊತ್ತಲ್ಲೇ ಇತ್ತ ಬೆಂಗಳೂರಿನ ಮನೆಯಲ್ಲಿ ತಾವು ಪ್ರೀತಿಯಿಂದ ಸಾಕಿದ್ದ ಶ್ವಾನ ಇನ್ನಿಲ್ಲವಾಗಿದೆ. ಪ್ರಾಣಿಗಳು ನಮ್ಮನ್ನು ಬಿಟ್ಟು ಹೋಗುವಾಗ ನಮ್ಮ ನೋವನ್ನೂ ಅವು ತಮ್ಮ ಜೊತೆಯಲ್ಲೇ ತೆಗೆದುಕೊಂಡು ಹೋಗುತ್ತವಂತೆ. ನನ್ನ ನೀಮೋ ಕೂಡ ಶಿವಣ್ಣನಿಗೆ ಇದ್ದ ನೋವನ್ನು ಶಾಶ್ವತವಾಗಿ ತೆಗೆದುಕೊಂಡು ಹೋಗಿದ್ದಾನೆ ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

ಡಿ. 24ರ ಸಂಜೆ 6 ಗಂಟೆಗೆ ಆರಂಭವಾಗಿ 4-5 ಗಂಟೆಗಳ ಕಾಲ ಆಪರೇಷನ್ ನಡೆದಿದ್ದು, ಅದು ಯಶಸ್ವಿಯಾಗಿದೆ. ಶಿವರಾಜ್​ಕುಮಾರ್ ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಸುಧಾರಿಸುತ್ತಿದ್ದಾರೆ. ತಮಗೆ ಗಂಭೀರ ಕಾಯಿಲೆ ಎಂದು ಗೊತ್ತಾದಲ್ಲಿಂದಲೂ ಶಿವರಾಜ್‌ಕುಮಾರ್ ಅದನ್ನು ಧೈರ್ಯವಾಗಿ, ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತಾ ಬಂದಿದ್ದರು. ಅದೇ ರೀತಿ ಸರ್ಜರಿಯನ್ನು ಕೂಡ ಪಾಸಿಟಿವ್ ಆಗಿ ತೆಗೆದುಕೊಂಡರು ಎಂದು ವೈದ್ಯರು ತಿಳಿಸಿದ್ದಾರೆ.

ಗೀತಾ ಶಿವರಾಜ್‌ಕುಮಾರ್ ಬರೆದ ಭಾವನಾತ್ಮಕ ಪತ್ರ ಇಲ್ಲಿದೆ....

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT