ಮೆರವಣಿಗೆಯಲ್ಲಿ ಸಂಸದ ಯದುವೀರ್ ಪಾಲ್ಗೊಂಡರು 
ರಾಜ್ಯ

ಮೈಸೂರು: ಹನುಮ ಹಬ್ಬ; ಬಿಗಿ ಭದ್ರತೆಯಲ್ಲಿ ಭವ್ಯ ಮೆರವಣಿಗೆ, ನೂರಾರು ಭಕ್ತರು ಭಾಗಿ!

ಮೈಸೂರು ಅರಮನೆಯ ಕೋಟೆ ಅಂಜನೇಯ ಸ್ವಾಮಿ ದೇವಾಲಯದ ಬಳಿ ಶ್ರೀರಾಮ, ಸೀತೆ, ಅಂಜನೇಯ ಹಾಗೂ ಲಕ್ಷ್ಮಣ ವಿಗ್ರಹಗಳಿಗೆ ಆದಿಚುಂಚನಗಿರಿ ಮಠದ ಸ್ವಾಮೀಜಿ ಸೋಮೇಶ್ವರ ನಾಥ ಸ್ವಾಮೀಜಿ ಪುಷ್ಪ ನಮನ ಹಾಗೂ ಗೌರವ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಮೈಸೂರು: ಹನುಮ ಜಯಂತಿ ಪ್ರಯುಕ್ತ ಮೈಸೂರು ಹನುಮಂತೋತ್ಸವ ಸಮಿತಿಯಿಂದ ಇಂದು 6ನೇ ವರ್ಷದ ಹನುಮ ಹಬ್ಬ ಹಾಗೂ ಭವ್ಯ ಮೆರವಣಿಗೆ ನಡೆಯಿತು.

ಮೈಸೂರು ಅರಮನೆಯ ಕೋಟೆ ಅಂಜನೇಯ ಸ್ವಾಮಿ ದೇವಾಲಯದ ಬಳಿ ಶ್ರೀರಾಮ, ಸೀತೆ, ಅಂಜನೇಯ ಹಾಗೂ ಲಕ್ಷ್ಮಣ ವಿಗ್ರಹಗಳಿಗೆ ಆದಿಚುಂಚನಗಿರಿ ಮಠದ ಸ್ವಾಮೀಜಿ ಸೋಮೇಶ್ವರ ನಾಥ ಸ್ವಾಮೀಜಿ ಪುಷ್ಪ ನಮನ ಹಾಗೂ ಗೌರವ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಗೂಡ್ಸ್ ಆಟೋ, ಜೀಪ್ ಮತ್ತು ಟ್ರಾಕ್ಟರ್ ಗಳಲ್ಲಿ 20ಕ್ಕೂ ಅಧಿಕ ಹನುಮ ವಿಗ್ರಹಗಳನ್ನು ಹೊತ್ತು ಸಾಗಿದ ಮೆರವಣಿಗೆಯಲ್ಲಿ ಎಲ್ಲೆಲ್ಲೂ ಕೇಸರಿ ಬಾವುಟಗಳು ರಾರಾಜಿಸುತ್ತಿದವು. ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಡ್ರಮ್ ಹೆಜ್ಜೆಗೆ ಕುಣಿದು ಕುಪ್ಪಳಿಸಿದರು. ಮೆರವಣಿಗೆಯುದ್ದಕ್ಕೂ ಜೈ ಶ್ರೀರಾಮ್ ಘೋಷಣೆ ಮುಗಿಲು ಮುಟ್ಟಿತು.

ಕೋಟೆ ಆಂಜನೇಯ ಸ್ವಾಮಿ ದೇವಾಲಯ ಬಳಿ ಆರಂಭವಾದ ಮೆರವಣಿಗೆ ಅಶೋಕ ರಸ್ತೆ, ಇರ್ವಿನ್, ಸಯ್ಯಾಜಿ ರಾವ್, ಡಿ. ದೇವರಾಜ ಅರಸ್ ಮತ್ತಿತರ ರಸ್ತೆಗಳ ಮೂಲಕ ಸಾಗಿ ಗನ್ ಹೌಸ್, ಹಾರ್ಡಿಂಜ್ ವೃತ್ತದ ಮೂಲಕ ಅಂತಿಮವಾಗಿ ಕೋಟೆ ಆಂಜನೇಯ ಸ್ವಾಮಿ ದೇಗುಲದ ಬಳಿ ಮುಕ್ತಾಯವಾಯಿತು.

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಜಿ. ಟಿ. ದೇವೇಗೌಡ, ಮಾಜಿ ಶಾಸಕ ಸಾರಾ ಮಹೇಶ್, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರರು ಮೆರವಣಿಗೆಯಲ್ಲಿ ಕೆಲವು ದೂರ ಸಾಗಿದರು. ಮೆರವಣಿಗೆಯಲ್ಲಿ ಯಾವುದೇ ಅಹಿತರ ಘಟನೆ ನಡೆಯದಂತೆ ಆರು ಕೆಎಸ್ ಆರ್ ಪಿ ತುಕಡಿ ಸೇರಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT