ಮೆರವಣಿಗೆಯಲ್ಲಿ ಸಂಸದ ಯದುವೀರ್ ಪಾಲ್ಗೊಂಡರು 
ರಾಜ್ಯ

ಮೈಸೂರು: ಹನುಮ ಹಬ್ಬ; ಬಿಗಿ ಭದ್ರತೆಯಲ್ಲಿ ಭವ್ಯ ಮೆರವಣಿಗೆ, ನೂರಾರು ಭಕ್ತರು ಭಾಗಿ!

ಮೈಸೂರು ಅರಮನೆಯ ಕೋಟೆ ಅಂಜನೇಯ ಸ್ವಾಮಿ ದೇವಾಲಯದ ಬಳಿ ಶ್ರೀರಾಮ, ಸೀತೆ, ಅಂಜನೇಯ ಹಾಗೂ ಲಕ್ಷ್ಮಣ ವಿಗ್ರಹಗಳಿಗೆ ಆದಿಚುಂಚನಗಿರಿ ಮಠದ ಸ್ವಾಮೀಜಿ ಸೋಮೇಶ್ವರ ನಾಥ ಸ್ವಾಮೀಜಿ ಪುಷ್ಪ ನಮನ ಹಾಗೂ ಗೌರವ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಮೈಸೂರು: ಹನುಮ ಜಯಂತಿ ಪ್ರಯುಕ್ತ ಮೈಸೂರು ಹನುಮಂತೋತ್ಸವ ಸಮಿತಿಯಿಂದ ಇಂದು 6ನೇ ವರ್ಷದ ಹನುಮ ಹಬ್ಬ ಹಾಗೂ ಭವ್ಯ ಮೆರವಣಿಗೆ ನಡೆಯಿತು.

ಮೈಸೂರು ಅರಮನೆಯ ಕೋಟೆ ಅಂಜನೇಯ ಸ್ವಾಮಿ ದೇವಾಲಯದ ಬಳಿ ಶ್ರೀರಾಮ, ಸೀತೆ, ಅಂಜನೇಯ ಹಾಗೂ ಲಕ್ಷ್ಮಣ ವಿಗ್ರಹಗಳಿಗೆ ಆದಿಚುಂಚನಗಿರಿ ಮಠದ ಸ್ವಾಮೀಜಿ ಸೋಮೇಶ್ವರ ನಾಥ ಸ್ವಾಮೀಜಿ ಪುಷ್ಪ ನಮನ ಹಾಗೂ ಗೌರವ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಗೂಡ್ಸ್ ಆಟೋ, ಜೀಪ್ ಮತ್ತು ಟ್ರಾಕ್ಟರ್ ಗಳಲ್ಲಿ 20ಕ್ಕೂ ಅಧಿಕ ಹನುಮ ವಿಗ್ರಹಗಳನ್ನು ಹೊತ್ತು ಸಾಗಿದ ಮೆರವಣಿಗೆಯಲ್ಲಿ ಎಲ್ಲೆಲ್ಲೂ ಕೇಸರಿ ಬಾವುಟಗಳು ರಾರಾಜಿಸುತ್ತಿದವು. ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಡ್ರಮ್ ಹೆಜ್ಜೆಗೆ ಕುಣಿದು ಕುಪ್ಪಳಿಸಿದರು. ಮೆರವಣಿಗೆಯುದ್ದಕ್ಕೂ ಜೈ ಶ್ರೀರಾಮ್ ಘೋಷಣೆ ಮುಗಿಲು ಮುಟ್ಟಿತು.

ಕೋಟೆ ಆಂಜನೇಯ ಸ್ವಾಮಿ ದೇವಾಲಯ ಬಳಿ ಆರಂಭವಾದ ಮೆರವಣಿಗೆ ಅಶೋಕ ರಸ್ತೆ, ಇರ್ವಿನ್, ಸಯ್ಯಾಜಿ ರಾವ್, ಡಿ. ದೇವರಾಜ ಅರಸ್ ಮತ್ತಿತರ ರಸ್ತೆಗಳ ಮೂಲಕ ಸಾಗಿ ಗನ್ ಹೌಸ್, ಹಾರ್ಡಿಂಜ್ ವೃತ್ತದ ಮೂಲಕ ಅಂತಿಮವಾಗಿ ಕೋಟೆ ಆಂಜನೇಯ ಸ್ವಾಮಿ ದೇಗುಲದ ಬಳಿ ಮುಕ್ತಾಯವಾಯಿತು.

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಜಿ. ಟಿ. ದೇವೇಗೌಡ, ಮಾಜಿ ಶಾಸಕ ಸಾರಾ ಮಹೇಶ್, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರರು ಮೆರವಣಿಗೆಯಲ್ಲಿ ಕೆಲವು ದೂರ ಸಾಗಿದರು. ಮೆರವಣಿಗೆಯಲ್ಲಿ ಯಾವುದೇ ಅಹಿತರ ಘಟನೆ ನಡೆಯದಂತೆ ಆರು ಕೆಎಸ್ ಆರ್ ಪಿ ತುಕಡಿ ಸೇರಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT