ಶ್ರದ್ಧಾಂಜಲಿ ಸಬೆಯಲ್ಲಿ ದೇವೇಗೌಡ 
ರಾಜ್ಯ

PV ನರಸಿಂಹ ರಾವ್ ಆಡಳಿತದಲ್ಲಿ ಹದಗೆಟ್ಟಿದ್ದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮನಮೋಹನ್ ಸಿಂಗ್ ಶಕ್ತಿ ಮೀರಿ ಪ್ರಯತ್ನ: ದೇವೇಗೌಡ

ಆರ್ಥಿಕವಾಗಿ ಅಪಾರ ಅನುಭವ ಹೊಂದಿದವರು. ನರಸಿಂಹ ರಾವ್ ಪ್ರಧಾನಿ ಆಗಿದ್ದಾಗ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. 130 ಟನ್ ಚಿನ್ನ ಅಡ ಇಡಲಾಗಿತ್ತು. ಆ ಸನ್ನಿವೇಶದಲ್ಲಿ ಹಣಕಾಸು ಸಚಿವರಾಗಿ ದೇಶವನ್ನು ಹಾಗೂ ದೇಶದ ಗೌರವವನ್ನು ಉಳಿಸಲು ಮನಮೋಹನ್‌ ಸಿಂಗ್ ಪ್ರಯತ್ನ ಶುರು ಮಾಡಿದ್ದರು.

ಬೆಂಗಳೂರು: ಹಣಕಾಸು ಸಚಿವರಾಗಿ, ಪ್ರಧಾನ ಮಂತ್ರಿಯಾಗಿ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲು, ಡಾ. ಮನಮೋಹನ್ ಸಿಂಗ್ ಶಕ್ತಿ ಮೀರಿ ಪ್ರಯತ್ನಿಸಿದ್ದರು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಹೇಳಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ನಡೆದ ಸಂತಾಪ ಸೂಚನೆ ಸಭೆಯಲ್ಲಿ ಮಾತನಾಡಿದ ಅವರು, ಪಿವಿ ನರಸಿಂಹ ರಾವ್ ಸರ್ಕಾರದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿತ್ತು. ಈ ಸಂದರ್ಭದಲ್ಲಿ ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿದ ಡಾ. ಸಿಂಗ್‌, ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡರು.

ಈ ಮೂಲಕ ದೇಶ ಆರ್ಥಿಕವಾಗಿ ದಿವಾಳಿ ಆಗುವುದನ್ನು ತಪ್ಪಿಸಿದರು ಎಂದು ಎಚ್‌ಡಿ ದೇವೇಗೌಡ ನೆನಪಿಸಿಕೊಂಡರು‌. 1991 ರಲ್ಲಿ ಲೋಕಸಭೆಯಲ್ಲಿ ತಮ್ಮ ಆರಂಭಿಕ ಅಧಿಕಾರಾವಧಿಯಲ್ಲಿ ಡಾ ಸಿಂಗ್ ಅವರೊಂದಿಗೆ ತಮ್ಮ ಮೊದಲ ಭೇಟಿಯನ್ನು ನೆನಪಿಸಿಕೊಂಡರು.

ಆರ್ಥಿಕವಾಗಿ ಅಪಾರ ಅನುಭವ ಹೊಂದಿದವರು. ನರಸಿಂಹ ರಾವ್ ಪ್ರಧಾನಿ ಆಗಿದ್ದಾಗ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. 130 ಟನ್ ಚಿನ್ನ ಅಡ ಇಡಲಾಗಿತ್ತು. ಆ ಸನ್ನಿವೇಶದಲ್ಲಿ ಹಣಕಾಸು ಸಚಿವರಾಗಿ ದೇಶವನ್ನು ಹಾಗೂ ದೇಶದ ಗೌರವವನ್ನು ಉಳಿಸಲು ಮನಮೋಹನ್‌ ಸಿಂಗ್ ಪ್ರಯತ್ನ ಶುರು ಮಾಡಿದ್ದರು ಎಂದು ಜೆಡಿಎಸ್‌ ವರಿಷ್ಠ ಇತಿಹಾಸವನ್ನು ಸ್ಮರಿಸಿದರು.

ನೇರ ವಿದೇಶಿ ಹೂಡಿಕೆ, ಖಾಸಗೀಕರಣ, ಮುಕ್ತ ಆರ್ಥಿಕತೆ ಸೇರಿದಂತೆ ಹಲವು ಸುಧಾರಣೆಗಳನ್ನು ತಂದರು.‌ ಅವರ ಕಾಲದಲ್ಲಿ ನಮ್ಮ ದೇಶದ ಸ್ಥಿತಿ ಯಾರ ರೀತಿಯಲ್ಲಿ ಇತ್ತು ಎಂಬುದು ಎಲ್ಲರಿಗೂ ಗೊತ್ತು. ದೇಶದ ಆರ್ಥಿಕತೆಯನ್ನು ಸರಿಪಡಿಸಲು ಡಾ. ಸಿಂಗ್ ಸರ್ವ ಪ್ರಯತ್ನ ಮಾಡಿದರು. ಅವರ ಕೆಲವು ನೀತಿಗಳು ಟೀಕೆಗೆ ಗುರಿಯಾಗಿದ್ದವು‌. ಆದರೆ ಈ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ ಎಂದು ಇದೇ ವೇಳೆ ಎಚ್‌ಡಿ ದೇವೇಗೌಡ ಸ್ಪಷ್ಟಪಡಿಸಿದರು.

ಮನಮೋಹನ್ ಸಿಂಗ್, ಸರಳ ಸಜ್ಜನ ಹಾಗೂ ಪ್ರಾಮಾಣಿಕ ವ್ಯಕ್ತಿಯಾಗಿದ್ದರು. ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಗೌರವಾರ್ಥವಾಗಿ ಸರ್ಕಾರಿ ಕೆಲಸ ನಡೆಯಲ್ಲ. ಪ್ರಧಾನಮಂತ್ರಿ ,ಹಣಕಾಸು ಸಚಿವ, ಆರ್ಥಿಕ ಸಲಹೆಗಾರರಾಗಿ ದೇಶಕ್ಕೆ ಸುದೀರ್ಘ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!

2ನೇ ಟಿ20: 51 ರನ್ ಗಳ ಅಂತರದಿಂದ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ! ಅನಗತ್ಯ ದಾಖಲೆ ಬರೆದ ಅರ್ಷದೀಪ್

ಸಿಎಂ ಸಿದ್ದರಾಮಯ್ಯರ ವಿಮಾನ ಪ್ರಯಾಣ: 'ರಾಜ್ಯದ ಬೊಕ್ಕಸ'ದಿಂದ ಆದ ಖರ್ಚು ಎಷ್ಟು ಗೊತ್ತಾ?

ಟ್ರಂಪ್ ಗೆ ಮೋದಿ ದೂರವಾಣಿ ಕರೆ: ಮಹತ್ವದ ಚರ್ಚೆ!

KSCA ಗೆ ಹೊಸ ಸದಸ್ಯರ ಸೇರ್ಪಡೆ: ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ- ವೆಂಕಟೇಶ್ ಪ್ರಸಾದ್

SCROLL FOR NEXT