ಅಪಘಾತ 
ರಾಜ್ಯ

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ವಾಹನ ತಲೆ ಮೇಲೆ ಹರಿದು ಬೈಕ್ ಸವಾರ ದುರ್ಮರಣ!

ಗಿರಿನಗರ ನಿವಾಸಿ ಶಂಕರ್ ಜಟ್ಟಿ (62) ಮೃತ ಸವಾರ. ನಿವೃತ್ತ ಬ್ಯಾಂಕ್ ನೌಕರರಾಗಿರುವ ಇವರು ಸಿಟಿ ಮಾರುಕಟ್ಟೆಗೆ ಬಂದು ತರಕಾರಿ ಖರೀದಿಸಿ ಮನೆಗೆ ತೆರಳುತ್ತಿದ್ದರು.

ಬೆಂಗಳೂರು: ನಿಯಂತ್ರಣ ತಪ್ಪಿ ರಸ್ತೆ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನದ ಚಕ್ರ ಹರಿದ ಪರಿಣಾಮ, ಸವಾರ ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ಸಿಟಿ.ಮಾರುಕಟ್ಟೆ-ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆಯಲ್ಲಿ ಶುಕ್ರವಾರ ನಡೆದಿದೆ.

ಗಿರಿನಗರ ನಿವಾಸಿ ಶಂಕರ್ ಜಟ್ಟಿ (62) ಮೃತ ಸವಾರ. ನಿವೃತ್ತ ಬ್ಯಾಂಕ್ ನೌಕರರಾಗಿರುವ ಇವರು ಸಿಟಿ ಮಾರುಕಟ್ಟೆಗೆ ಬಂದು ತರಕಾರಿ ಖರೀದಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬಿಜಿಎಸ್ ಮೇಲ್ಸೇತುವೆಯಲ್ಲಿ ನಿಯಂತ್ರಣ ತಪ್ಪಿದ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ, ಪರಿಣಾಮ ಪಕ್ಕದ ರಸ್ತೆಗೆ ಬಿದ್ದಿದ್ದಾರೆ.

ಈ ವೇಳೆ ಮೈಸೂರು ರಸ್ತೆ ಕಡೆಯಿಂದ ಸಿಟಿ ಮಾರುಕಟ್ಟೆಗೆ ಬರುತ್ತಿದ್ದ ಅಪರಿಚತ ವಾಹನದ ಚಕ್ರ ಅವರ ತಲೆ ಮೇಲ ಹರಿದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ಬಂದ ಸಂಚಾರ ಪೊಲೀಸರು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಚಾಮರಾಜಪೇಟೆ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತ ಎಸಗಿದ ಅಪರಿಚಿತ ವಾಹನದ ಪತ್ತೆಯಾಗಾಗಿ ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT