ಸಿ.ಎಸ್ ಷಡಾಕ್ಷರಿ  
ರಾಜ್ಯ

ರಾಜ್ಯ ಸರ್ಕಾರಿ ನೌಕರರ ಸಂಘ ಚುನಾವಣೆ: 2ನೇ ಅವಧಿಗೆ ಸಿಎಸ್ ಷಡಾಕ್ಷರಿ ಪುನರಾಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಶುಕ್ರವಾರ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಿತು.

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ 2ನೇ ಅವಧಿಗೆ ಸಿ.ಎಸ್ ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಶುಕ್ರವಾರ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್​.ಷಡಾಕ್ಷರಿಗೆ ಅವರಿಗೆ 507 ಮತಗಳು ಬಂದರೆ, ಬಿ.ಪಿ.ಕೃಷ್ಣೇಗೌಡಗೆ 442 ಮತಗಳು ಲಭಿಸಿದ್ದವು.

ಖಚಾಂಜಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ ನಾಗರಾಜ ಆರ್​.ಜುಮ್ಮನ್ನವರ (ಷಡಾಕ್ಷರಿ ಬಣ), ವಿ.ವಿ.ಶಿವರುದ್ರಯ್ಯ (ಬಿ.ಪಿ.ಕೃಷ್ಣೇಗೌಡ ಬಣ) ವಿರುದ್ಧ ಕೇವಲ 18 ಮತಗಳ ಅಂತರದಿಂದ ಸೋಲು ಅನುಭವಿಸಿದರು. ವಿ.ವಿ.ಶಿವರುದ್ರಯ್ಯ 485 ಮತ ಪಡೆದರೆ, ನಾಗರಾಜ ಆರ್​.ಜುಮ್ಮನ್ನವರಗೆ 467 ಮತಗಳು ಬಂದಿವೆ.

ಬೆಂಗಳೂರು ನಗರ ಜಿಲ್ಲೆಯ 102 ರಾಜ್ಯ ಪರಿಷತ್​ ಸದಸ್ಯರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ಜಿಲ್ಲಾ ರಾಜ್ಯ ಪರಿಷತ್​ ಸದಸ್ಯರು, ಜಿಲ್ಲಾ ಕಾರ್ಯದರ್ಶಿ, ತಾಲೂಕು ಶಾಖೆಯ ಅಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್​ ಸದಸ್ಯರು, ಕಾರ್ಯದರ್ಶಿ ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು ಸೇರಿ ಒಟ್ಟು 949 ಮತದಾರರು ಮತ ಚಲಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT