ಸಿ.ಎಸ್ ಷಡಾಕ್ಷರಿ  
ರಾಜ್ಯ

ರಾಜ್ಯ ಸರ್ಕಾರಿ ನೌಕರರ ಸಂಘ ಚುನಾವಣೆ: 2ನೇ ಅವಧಿಗೆ ಸಿಎಸ್ ಷಡಾಕ್ಷರಿ ಪುನರಾಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಶುಕ್ರವಾರ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಿತು.

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ 2ನೇ ಅವಧಿಗೆ ಸಿ.ಎಸ್ ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಶುಕ್ರವಾರ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್​.ಷಡಾಕ್ಷರಿಗೆ ಅವರಿಗೆ 507 ಮತಗಳು ಬಂದರೆ, ಬಿ.ಪಿ.ಕೃಷ್ಣೇಗೌಡಗೆ 442 ಮತಗಳು ಲಭಿಸಿದ್ದವು.

ಖಚಾಂಜಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ ನಾಗರಾಜ ಆರ್​.ಜುಮ್ಮನ್ನವರ (ಷಡಾಕ್ಷರಿ ಬಣ), ವಿ.ವಿ.ಶಿವರುದ್ರಯ್ಯ (ಬಿ.ಪಿ.ಕೃಷ್ಣೇಗೌಡ ಬಣ) ವಿರುದ್ಧ ಕೇವಲ 18 ಮತಗಳ ಅಂತರದಿಂದ ಸೋಲು ಅನುಭವಿಸಿದರು. ವಿ.ವಿ.ಶಿವರುದ್ರಯ್ಯ 485 ಮತ ಪಡೆದರೆ, ನಾಗರಾಜ ಆರ್​.ಜುಮ್ಮನ್ನವರಗೆ 467 ಮತಗಳು ಬಂದಿವೆ.

ಬೆಂಗಳೂರು ನಗರ ಜಿಲ್ಲೆಯ 102 ರಾಜ್ಯ ಪರಿಷತ್​ ಸದಸ್ಯರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ಜಿಲ್ಲಾ ರಾಜ್ಯ ಪರಿಷತ್​ ಸದಸ್ಯರು, ಜಿಲ್ಲಾ ಕಾರ್ಯದರ್ಶಿ, ತಾಲೂಕು ಶಾಖೆಯ ಅಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್​ ಸದಸ್ಯರು, ಕಾರ್ಯದರ್ಶಿ ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು ಸೇರಿ ಒಟ್ಟು 949 ಮತದಾರರು ಮತ ಚಲಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!