KSRTC ಬಸ್ ಸಾಂದರ್ಭಿಕ ಚಿತ್ರ 
ರಾಜ್ಯ

KSRTC: ಡಿಸೆಂಬರ್ 31 ರಂದು ಕರೆ ನೀಡಿದ್ದ ಮುಷ್ಕರ ಹಿಂಪಡೆದ ಜಂಟಿ ಕ್ರಿಯಾ ಸಮಿತಿ!

ಇಂದು ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯ ಜೊತೆಗೆ ಸಾರಿಗೆ ರಾಮಲಿಂಗಾರೆಡ್ಡಿ ಸಭೆ ನಡೆಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂಪಡೆಯಲು ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತೀರ್ಮಾನಿಸಿದೆ.

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿ ಡಿ.31 ರಂದು ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆದಿವೆ.

ಇಂದು ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯ ಜೊತೆಗೆ ಸಾರಿಗೆ ರಾಮಲಿಂಗಾರೆಡ್ಡಿ ಸಭೆ ನಡೆಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂಪಡೆಯಲು ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತೀರ್ಮಾನಿಸಿದೆ.

ಸಭೆಯಲ್ಲಿ ಸಾರಿಗೆ ಇಲಾಖೆ 4 ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಭಾಗಿಯಾಗಿದ್ದರು. ಈ ವೇಳೆ ಸಾರಿಗೆ ಸಿಬ್ಬಂದಿ ಬೇಡಿಕೆ ಬಗ್ಗೆ ಸಿಎಂಗೆ ಮನವರಿಕೆ ಮಾಡಲಾಗಿದೆ ಎನ್ನಲಾಗಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಸಿಬ್ಬಂದಿ ಮುಷ್ಕರದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ದೇವೆ. ಬಿಜೆಪಿ ಸರ್ಕಾರ ರೂ.5,900 ಕೋಟಿ ಸಾಲ ಬಿಟ್ಟು ಹೋಗಿದ್ದೇ ಸಮಸ್ಯೆಗೆ ಕಾರಣವಾಗಿದೆ. ಫೆಬ್ರವರಿ ಬಜೆಟ್‌ನಲ್ಲಿ ಇಲಾಖೆಗೆ ಅನುದಾನ ನೀಡಿ ಅಂತಾ ಬೇಡಿಕೆ ಇಟ್ಟಿದ್ದೇನೆ. ಸಂಕ್ರಾಂತಿ ಹಬ್ಬದ ಬಳಿಕ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.

ಸಂಕ್ರಾಂತಿ ಹಬ್ಬದ ಬಳಿಕ ಮತ್ತೆ ಸಭೆ ನಡೆಸಲಿರುವ ಜಂಟಿ ಕ್ರಿಯಾ ಸಮಿತಿ:

ಸಿಎಂ ಸಿದ್ದರಾಮಯ್ಯ ಜೊತೆಗೆ ಸಾರಿಗೆ ಸಚಿವರ ಮಾತುಕತೆ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್ 31 ರಂದು ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆಯಲು ನಿರ್ಧರಿಸಿವೆ. ಸಂಕ್ರಾಂತಿ ಬಳಿಕ ಜಂಟಿ ಕ್ರಿಯಾ ಸಮಿತಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಸ್ತೆ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಮುಷ್ಕರ ವಾಪಸ್ ಹಿನ್ನೆಲೆಯಲ್ಲಿ ಡಿಸೆಂಬರ್ 31 ರಂದು ಸಾರಿಗೆ ಸಂಸ್ಥೆ ಬಸ್ ಗಳು ಎಂದಿನಂತೆ ಕಾರ್ಯಾಚರಣೆ ನಡೆಸಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT