ವಿಜಯಲಕ್ಷ್ಮಿ ದರ್ಶನ್ 
ರಾಜ್ಯ

ಬದಲಾವಣೆ ಭಯಾನಕವಾಗಿರತ್ತೆ, ಆದರೆ ಬದಲಾವಣೆಯೇ ಮುಂದೆ ಬೆಳವಣಿಗೆಗೆ ದಾರಿ: ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?

ಸಾಧಾರಣ ಹುಳದಂತೆ ತಮಗೆ ತಾವು ಗಡಿ ಹಾಕಿಕೊಂಡು ಇದ್ದ ವಿಜಯಲಕ್ಷ್ಮಿ ಈ ವರ್ಷ, ದರ್ಶನ್ ಪ್ರಕರಣದ ನಂತರ ಜವಾಬ್ದಾರಿಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಗಡಿಗಳನ್ನು ದಾಟಿ ಹೊರಗೆ ಬಂದಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಇದರ ಬೆನ್ನಲ್ಲೇ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಈ ವರ್ಷ ಕಲಿತ ಪಾಠದ ಬಗ್ಗೆ ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದಾರೆ.

ಬದಲಾವಣೆ ಭಯಾನಕವಾಗಿರತ್ತೆ, ಆದರೆ ಬದಲಾವಣೆಯೇ ಮುಂದೆ ಬೆಳವಣಿಗೆಗೆ ದಾರಿ

ನೋವು ಜನರನ್ನು ಬದಲಾಯಿಸುತ್ತದೆ

ನಾವು ಒಂದು ಪ್ಲ್ಯಾನ್‌ ಮಾಡಿದರೆ, ದೇವರ ಪ್ಲ್ಯಾನ್‌ ಬೇರೆದಾಗಿರತ್ತೆ!

ಜೀವನವು ನೆನಪುಗಳ ಸಂಗ್ರಹವಲ್ಲದೆ ಬೇರೇನೂ ಅಲ್ಲ

ಕನ್ನಡಿ ನನ್ನ ಉತ್ತಮ ಸ್ನೇಹಿತ ಏಕೆಂದರೆ ನಾನು ಅತ್ತಾಗ, ಅದು ನನ್ನ ನೋಡಿ ಎಂದಿಗೂ ನಗುವುದಿಲ್ಲ

ನೀರು ತುಂಬಾ ಐಷಾರಾಮಿ ಅಲ್ಲ ಆದರೆ ಜೀವನಕ್ಕೆ ತುಂಬ ಮೌಲ್ಯಯುತವಾಗಿದೆ ಎಂದು ಬರೆದುಕೊಂಡಿದ್ದಾರೆ.

ಹುಳುವೊಂದು ಚಿಟ್ಟೆಯಾಗಿ ಹಾರುವ ಚಿತ್ರವನ್ನು ಹಂಚಿಕೊಂಡಿದ್ದು, ‘ಬದಲಾವಣೆ ಭಯ ‘ಹುಟ್ಟಿಸುತ್ತದೆ ಆದರೆ ಬದಲಾವಣೆಯೇ ಬೆಳವಣಿಗೆ’ ಎಂದಿದ್ದಾರೆ. ಸಾಧಾರಣ ಹುಳದಂತೆ ತಮಗೆ ತಾವು ಗಡಿ ಹಾಕಿಕೊಂಡು ಇದ್ದ ವಿಜಯಲಕ್ಷ್ಮಿ ಈ ವರ್ಷ, ದರ್ಶನ್ ಪ್ರಕರಣದ ನಂತರ ಜವಾಬ್ದಾರಿಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಗಡಿಗಳನ್ನು ದಾಟಿ ಹೊರಗೆ ಬಂದಿದ್ದಾರೆ. ಇದೇ ಕಾರಣಕ್ಕೆ ಈ ಚಿತ್ರ ಹಾಗೂ ಸಾಲುಗಳನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ. ನೀವು ಒಂದು ಮುದುಡಿದ ಹೂವು ಆಗಿ ಇದ್ದುಬಿಡುವ ಆಲೋಚನೆಯಲ್ಲಿರುತ್ತೀರಿ, ಆದರೆ ದೇವರು ನಿಮ್ಮನ್ನು ಹೂಗುಚ್ಛವನ್ನೇ ಮಾಡುವ ಆಲೋಚನೆಯಲ್ಲಿರುತ್ತಾರೆ ಎಂದಿರುವ ವಿಜಯಲಕ್ಷ್ಮಿ, ಸದಾ ದೇವರ ಯೋಜನೆಯೇ ಕಾರ್ಯರೂಪಕ್ಕೆ ಬರುತ್ತದೆ ಎಂಬರ್ಥ ಮೂಡುವ ಪೋಸ್ಟ್ ಹಂಚಿಕೊಂಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ ಬಳಿಕ ವಿಜಯಲಕ್ಷ್ಮಿ ಜವಾಬ್ದಾರಿ ತೆಗೆದುಕೊಂಡು ತಾವೇ ಮುಂದೆ ನಿಂತು ಎಲ್ಲೆಡೆ ಓಡಾಡಿ ವಕೀಲರ ಭೇಟಿಯಾಗಿ ದರ್ಶನ್​ಗೆ ಜಾಮೀನು ಕೊಡಿಸುವಲ್ಲಿ ಯಶಸ್ವಿ ಆಗಿದ್ದಾರೆ. ದರ್ಶನ್ ಜೈಲಿನಲ್ಲಿ ಇರುವಷ್ಟು ಸಮಯ ಸಾಕಷ್ಟು ಸವಾಲುಗಳನ್ನು ಅವರು ಹೊರಗೆ ಅನುಭವಿಸಿದ್ದಾರೆ. ಅದರಿಂದ ಸಾಕಷ್ಟು ಪಾಠಗಳನ್ನು ಅವರು ಕಲಿತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಎಚ್.ಎಸ್. ಪರ್ಪುರಾ: ಸಣ್ಣ ರಕ್ತನಾಳಗಳ ಉರಿಯೂತದ ಕಾಯಿಲೆ (ಕುಶಲವೇ ಕ್ಷೇಮವೇ)

SCROLL FOR NEXT