ಸಾಂದರ್ಭಿಕ ಚಿತ್ರ 
ರಾಜ್ಯ

ದೇವನಹಳ್ಳಿ: ವ್ಹೀಲಿಂಗ್ ಹುಚ್ಚಾಟ; ಟ್ರಕ್‌ಗೆ ಸ್ಕೂಟರ್ ಡಿಕ್ಕಿ; ಇಬ್ಬರು ಯುವಕರು ಸಾವು

ಬೆಳಗ್ಗೆ 9.30ರ ಸುಮಾರಿಗೆ ಪಾಷಾ ಮತ್ತು ಮನೋಜ್‌ ದೇವನಹಳ್ಳಿಯಿಂದ ‘ಎಚ್‌’ ಕ್ರಾಸ್‌ ಕಡೆಗೆ ಹೋಗುತ್ತಿದ್ದರು. ವೇಗವಾಗಿ ವ್ಹೀಲಿ ಚಲಾಯಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರು ಹೊರವಲಯದ ದೇವನಹಳ್ಳಿ ತಾಲೂಕಿನ ವಿಜಯಪುರ ಬೈಪಾಸ್ ರಸ್ತೆ ಬಳಿ ಶುಕ್ರವಾರ ಬೆಳಗ್ಗೆ ಸ್ಕೂಟರ್‌ನಲ್ಲಿ ಅಪಾಯಕಾರಿ ಸಾಹಸ ಪ್ರದರ್ಶಿಸುತ್ತಿದ್ದ ಇಬ್ಬರು ಯುವಕರು ಲಾರಿಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ಮೃತರನ್ನು ಸ್ಕೂಟರ್ ಚಲಾಯಿಸುತ್ತಿದ್ದ ಅಬ್ರೇಜ್ ಪಾಷಾ (18) ಮತ್ತು ಪಿಲಿಯನ್ ರೈಡರ್ ಮನೋಜ್ (16) ಎಂದು ಗುರುತಿಸಲಾಗಿದೆ. ಇಬ್ಬರೂ ವಿಜಯಪುರ ಪಟ್ಟಣದ ನಿವಾಸಿಗಳು. ಮನೋಜ್ 8ನೇ ತರಗತಿ ವಿದ್ಯಾರ್ಥಿ. ತನ್ನ ಅಧ್ಯಯನವನ್ನು ನಿಲ್ಲಿಸಿದ ಪಾಷಾ ನಿರುದ್ಯೋಗಿಯಾಗಿದ್ದನು.

ಬೆಳಗ್ಗೆ 9.30ರ ಸುಮಾರಿಗೆ ಪಾಷಾ ಮತ್ತು ಮನೋಜ್‌ ದೇವನಹಳ್ಳಿಯಿಂದ ‘ಎಚ್‌’ ಕ್ರಾಸ್‌ ಕಡೆಗೆ ಹೋಗುತ್ತಿದ್ದರು. ವೇಗವಾಗಿ ವ್ಹೀಲಿ ಚಲಾಯಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಷಾ ತನ್ನ ಸ್ಕೂಟರ್ ಮೇಲೆ ನಿಯಂತ್ರಣ ಕಳೆದುಕೊಂಡು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪಾಷಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಗಂಭೀರ ಗಾಯಗೊಂಡಿದ್ದ ಮನೋಜ್‌ನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಪಾಷಾ ಬಳಿ ಡ್ರೈವಿಂಗ್ ಲೈಸೆನ್ಸ್ ಇರಲಿಲ್ಲ. ವಿಜಯಪುರ ಪೊಲೀಸರು ಸ್ಕೂಟರ್ ಅನ್ನು ವಶಪಡಿಸಿಕೊಂಡು ಅದರ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT