ನಟ ದರ್ಶನ್ 
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಜಾಮೀನು ಪ್ರಶ್ನಿಸಿ ಮೇಲ್ಮನವಿ; ವಿಶೇಷ ವಕೀಲರ ನೇಮಕ

ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜೆ ಅರ್ಜಿಯನ್ನು(ಎಸ್‌ಎಲ್‌ಪಿ) ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ತೂಗುದೀಪ ಹಾಗೂ ಇತರರಿಗೆ ಜಾಮೀನು ನೀಡಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜೆ ಅರ್ಜಿಯನ್ನು(ಎಸ್‌ಎಲ್‌ಪಿ) ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಪ್ರಕರಣದಲ್ಲಿ ರಾಜ್ಯವನ್ನು ಪ್ರತಿನಿಧಿಸಲು ಹಿರಿಯ ವಕೀಲ ಸಿದ್ದಾರ್ಥ್ ಲೂಥ್ರಾ ಅವರನ್ನು ವಿಶೇಷ ವಕೀಲರನ್ನಾಗಿ ನೇಮಿಸಲಾಗಿದೆ. ಅಲ್ಲದೆ ಎಸ್‌ಎಲ್‌ಪಿಗೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುವಂತೆ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಆದೇಶದಲ್ಲಿ ಸೂಚಿಸಲಾಗಿದೆ.

ನಟ ದರ್ಶನ್ ಅವರು 131 ದಿನಗಳ ಬಂಧನದ ನಂತರ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಅಕ್ಟೋಬರ್ 30 ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ನಂತರ ಹೈಕೋರ್ಟ್ ಡಿಸೆಂಬರ್ 13 ರಂದು ದರ್ಶನ್ ಮತ್ತು ಪ್ರಮುಖ ಆರೋಪಿ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಸಾಮಾನ್ಯ ಜಾಮೀನು ಮಂಜೂರು ಮಾಡಿತ್ತು.

ಸೆಪ್ಟೆಂಬರ್‌ನಲ್ಲಿ ಬೆಂಗಳೂರು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 3,991 ಪುಟಗಳ ಸಮಗ್ರ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

SCROLL FOR NEXT