ಹುಂಡಿಯಲ್ಲಿ ಪತ್ತೆಯಾದ ಕೈ ಬರಹದ ನೋಟು 
ರಾಜ್ಯ

Viral News: 'ಅತ್ತೆ ಬೇಗ ಸಾಯುವಂತೆ ಮಾಡು'; 20 ರೂ ನೋಟಿನಲ್ಲಿ ದೇವರಿಗೆ ವಿಚಿತ್ರ ಕೋರಿಕೆ!

ಭಕ್ತೆಯೊಬ್ಬರು ದೇವಸ್ಥಾನದ ಹುಂಡಿಯಲ್ಲಿ ಹಾಕಿದ್ದ ನೋಟಿನ ಮೇಲೆ 'ನಮ್ಮ ಅತ್ತೆ ಬೇಗ ಸಾಯಬೇಕು ಎಂದು ಬರೆದು ಹಾಕಿದ್ದಾರೆ.

ಕಲಬುರಗಿ: ಹುಂಡಿ ಹಣ ಎಣಿಕೆ ವೇಳೆ ನೋಟಿನ ಮೇಲೆ ಭಕ್ತರೊಬ್ಬರು ಬರೆದಿದ್ದ ಸಾಲುಗಳನ್ನು ನೋಡಿ ದೇವಸ್ಥಾನದ ಸಿಬ್ಬಂದಿಗಳೇ ತಬ್ಬಿಬಾದ ಘಟನೆ ಕರ್ನಾಟಕದಲ್ಲಿ ನಡೆದಿದೆ.

ಕರ್ನಾಟಕದ ಕಲಬುರಗಿ ಜಿಲ್ಲೆ ಅಫಜಲಾಪುರ ತಾಲೂಕಿನ ಘತ್ತರಗಿ ಗ್ರಾಮದ ಭಾಗ್ಯವಂತಿ ದೇವಿ ದೇವಸ್ಥಾನದಲ್ಲಿ ಘಟನೆ ನಡೆದಿದ್ದು, ಭಕ್ತೆಯೊಬ್ಬರು ದೇವಸ್ಥಾನದ ಹುಂಡಿಯಲ್ಲಿ ಹಾಕಿದ್ದ ನೋಟಿನ ಮೇಲೆ 'ನಮ್ಮ ಅತ್ತೆ ಬೇಗ ಸಾಯಬೇಕು ಎಂದು ಬರೆದು ಹಾಕಿದ್ದಾರೆ. ಇತ್ತೀಚೆಗೆ ದೇಗುಲದ ಹುಂಡಿ ಹಣ ಎಣಿಕೆ ವೇಳೆ ಸಿಬ್ಬಂದಿ ಈ ನೋಟನ್ನು ನೋಡಿ ತಬ್ಬಿಬ್ಬಾಗಿದ್ದಾರೆ.

ಭಾಗ್ಯವಂತಿ ದೇವಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಮಾಡುವಾಗ ಈ 20 ರೂಪಾಯಿ ನೋಟು ಪತ್ತೆಯಾಗಿದೆ. ನೋಟಿನ ಮೇಲೆ ಬರೆದಿರುವ ಈ ವಾಕ್ಯ ನೋಡಿ ಸಿಬ್ಬಂದಿ ಅಚ್ಚರಿಗೊಂಡರು. ಕೂಡಲೇ ಸಿಬ್ಬಂದಿ ದೇವಸ್ಥಾನದ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಇದೀಗ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಅಂದಹಾಗೆ ಭಾಗ್ಯವಂತಿ ದೇವಿ ದೇವಸ್ಥಾನದಲ್ಲಿ ಪ್ರತಿ ವರ್ಷ ಹುಂಡಿ ಎಣಿಕೆ ನಡೆಯುತ್ತದೆ. ಈ ವರ್ಷ ಹುಂಡಿಯಿಂದ ಸುಮಾರು ರೂ. 60 ಲಕ್ಷ ನಗದು ಹಾಗೂ 1 ಕೆಜಿ ಬೆಳ್ಳಿ ವಸ್ತುಗಳನ್ನು ಸಂಗ್ರಹಿಸಲಾಗಿದೆ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ. ದೇಗುಲಕ್ಕೆ ಬರುವ ಕೆಲ ಭಕ್ತರು ತಮ್ಮ ಕೋರಿಕೆಗಳನ್ನು ಬರೆದು ಅದನ್ನು ಹುಂಡಿಗೆ ಹಾಕುತ್ತಾರೆ. ಇದೇ ರೀತಿ ಸೊಸೆಯೊಬ್ಬರು ತಮ್ಮ ಅತೆ ಸಾವಿನ ಕೋರಿಕೆ ಕೋರಿ ಹುಂಡಿಗೆ ಹಣ ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ ನಂತರವೂ ತೈಲ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ: ಇರಾನ್

ಮೋದಿ ರ‍್ಯಾಲಿಗೆ ಮುನ್ನ ಕೋಲ್ಕತ್ತಾದಲ್ಲಿ TMC, BJP ಕಾರ್ಯಕರ್ತರ ನಡುವೆ ಮಾರಾಮಾರಿ; ಪರಸ್ಪರ ಕಲ್ಲು ತೂರಾಟ

'ರನ್-ಔಟ್ ಹೆಸರಿನಲ್ಲಿ ನಂಬಿಕೆ ದ್ರೋಹ': ಭಾರತದ ಮಾಜಿ ಕ್ರಿಕೆಟಿಗ Mohammad Kaif ಕಿಡಿ, ಹೇಳಿದ್ದು ಯಾರಿಗೆ?

4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸರ್ಕಾರ ಸಮ್ಮತಿ: ರಾಜ್ಯದಲ್ಲಿ 14,525 ಉದ್ಯೋಗ ಅವಕಾಶ ಸೃಷ್ಟಿ!

ನಿಮ್ ಕೈಲಾಗಲ್ಲ ಅಂದ್ರೆ ರಾಜಿನಾಮೆ ನೀಡಿ: 'ನಮಾಜ್ ಆದೇಶ' ಪಾಲನೆ ಕುರಿತು ಹೈಕೋರ್ಟ್ ಕೆಂಡಾಮಂಡಲ!

SCROLL FOR NEXT