ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ 
ರಾಜ್ಯ

ಶಿವಮೊಗ್ಗ: ಸತತ 10 ಗಂಟೆಗಳ ಕಾರ್ಯಾಚರಣೆ; 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ

ವಾಹನ ದಟ್ಟಣೆ ಮತ್ತು ಜನರಿಂದ ಗಾಬರಿಗೊಂಡು ತರಾತುರಿಯಲ್ಲಿ ರಕ್ಷಣೆ ಪಡೆಯಲು ಆಕಸ್ಮಿಕವಾಗಿ ಮುಚ್ಚದೇ ಇದ್ದ ಬೋರ್‌ವೆಲ್ ಪೈಪ್‌ಗೆ ಹಾವು ಬಿದ್ದಿತ್ತು.

ಶಿವಮೊಗ್ಗ: ನಾಟಕೀಯ ಬೆಳವಣಿಗೆಯಲ್ಲಿ ಇತ್ತೀಚೆಗೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ಸುಮಾರು 540 ಅಡಿ ಆಳದ ಬೋರ್‌ವೆಲ್ ಪೈಪ್‌ಗೆ ಬಿದ್ದಿದ್ದ ಸುಮಾರು ಮೂರು ಅಡಿ ಉದ್ದದ ನಾಗರಹಾವನ್ನು ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ.

ಪ್ರದೇಶದ ಜನನಿಬಿಡ ಮುಖ್ಯ ರಸ್ತೆಯನ್ನು ದಾಟುವ ವೇಳೆ ಹಾವು ಬೋರ್‌ವೆಲ್ ಪೈಪ್‌ಗೆ ಬಿದ್ದಿತ್ತು. ವಾಹನ ದಟ್ಟಣೆ ಮತ್ತು ಜನರಿಂದ ಗಾಬರಿಗೊಂಡು ತರಾತುರಿಯಲ್ಲಿ ರಕ್ಷಣೆ ಪಡೆಯಲು ಆಕಸ್ಮಿಕವಾಗಿ ಮುಚ್ಚದೇ ಇದ್ದ ಬೋರ್‌ವೆಲ್ ಪೈಪ್‌ಗೆ ಹಾವು ಬಿದ್ದಿತ್ತು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಸ್ಥಳೀಯರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಮೂಡಿಸಿತ್ತು.

ನಾಗರಹಾವನ್ನು ರಕ್ಷಿಸುವ ಆರಂಭಿಕ ಪ್ರಯತ್ನದಲ್ಲಿ, ನಿವಾಸಿಗಳು ಹಾವು ಜೀವಂತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಕ್ಯಾಮೆರಾವನ್ನು ಬಳಸಿದರು ಮತ್ತು ಅದನ್ನು ಹಿಡಿಯಲು ನಾಲ್ಕು ದಿನಗಳ ಕಾಲ ವಿವಿಧ ವಿಧಾನಗಳನ್ನು ಅನುಸರಿಸಿದರು. ಜನರ ಎಲ್ಲಾ ಪ್ರಯತ್ನಗಳು ವಿಫಲವಾದಾಗ, ಅವರು ಅರಣ್ಯ ಇಲಾಖೆ ಮತ್ತು ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರ(ARRS)ದ ಸಹಾಯ ಕೋರಿದ್ದಾರೆ.

ಪರಿಶೀಲನೆಯ ನಂತರ, ಕ್ಷೇತ್ರ ನಿರ್ದೇಶಕ ಅಜಯ್ ಗಿರಿ ನೇತೃತ್ವದ ARRS ತಂಡ ಸ್ಥಳೀಯರ ಸಹಕಾರದೊಂದಿಗೆ ಸುಮಾರು 10 ಗಂಟೆಗಳ ಕಾಲ ನಡೆದ ಸೂಕ್ಷ್ಮ ಕಾರ್ಯಾಚರಣೆಯ ನಂತರ ಹಾವಿಗೆ ಯಾವುದೇ ಹಾನಿಯಾಗದಂತೆ ಹೊರತೆಗೆಯಲಾಗಿದೆ.

ಹಾವನ್ನು ಗುರುತಿಸಲು ಕೊಳವೆಬಾವಿಯಲ್ಲಿ ಪೈಪ್ ಮತ್ತು ಕ್ಯಾಮೆರಾವನ್ನು ಇಳಿಸಲಾಯಿತು. 240 ಅಡಿ ಆಳದಲ್ಲಿ ನಾಗರಹಾವು ಪತ್ತೆಯಾಗಿದೆ. ಬೋರ್‌ವೆಲ್‌ನಿಂದ ಎಲ್ಲಾ ಪಿವಿಸಿ ಪೈಪ್‌ಗಳನ್ನು ತೆಗೆಯಲಾಗಿದೆ. ಅಂತಿಮವಾಗಿ, ತಂಡವು ಹಾವನ್ನು ಕೊಕ್ಕೆ ಹಾಕುವಲ್ಲಿ ಯಶಸ್ವಿಯಾಯಿತು.

ಬೋರ್‌ವೆಲ್ ಪೈಪ್‌ಗೆ ಬಿದ್ದಿದ್ದ ನಾಗರಹಾವನ್ನು ಸುರಕ್ಷಿತವಾಗಿ ಹೊರ ತೆಗೆದ ರಕ್ಷಣಾ ತಂಡ, ಅದನ್ನು ಮರಳಿ ಕಾಡಿಗೆ ಬಿಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT