ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ 
ರಾಜ್ಯ

ಜಾತಿ ತಾರತಮ್ಯ ಆರೋಪ: IIMB ಡೀನ್, ನಿರ್ದೇಶಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಬಂಧಿಸಿದಂತೆ ವಿಚಾರಣೆ ನಡೆಸಲು ಯಾವುದೇ ಅಧಿಕಾರ ಇಲ್ಲ ಎಂದು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಇತ್ತೀಚೆಗೆ ಹೊರಡಿಸಿದ ಮಧ್ಯಂತರ ತಡೆಯಾಜ್ಞೆಯಲ್ಲಿ ಹೇಳಿದರು.

ಬೆಂಗಳೂರು: ಜಾತಿ ಆಧಾರಿತ ತಾರತಮ್ಯ ಮತ್ತು ಅವಮಾನ ಆರೋಪದಲ್ಲಿ IIMB ಮಾರ್ಕೆಟಿಂಗ್ ಸಹಾಯಕ ಪ್ರಾಧ್ಯಾಪಕರೊಬ್ಬರು ದಾಖಲಿಸಿದ ದೂರಿನ ಆಧಾರದ ಮೇಲೆ IIMB ಡೀನ್, ನಿರ್ದೇಶಕ ಮತ್ತು ಅಧ್ಯಾಪಕರ ವಿರುದ್ಧ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE) ಆರಂಭಿಸಿದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮೀಸಲಾತಿ ಇತ್ಯಾದಿ) ನಿಯಮಗಳು 1992 ರ ಸೆಕ್ಷನ್ 7 (ಎ) ಪ್ರಕಾರ, ಜಾತಿ ಪ್ರಮಾಣಪತ್ರವನ್ನು ಮೋಸದಿಂದ ಪಡೆದ ಮತ್ತು ವಿಚಾರಣೆ ಮಾಡಲು ಯಾವುದೇ ಅಧಿಕಾರವಿಲ್ಲದ ವ್ಯಕ್ತಿಯ ವಿರುದ್ಧ DCRE ಕಾನೂನು ಕ್ರಮ ಕೈಗೊಳ್ಳಬಹುದು. ಆದರೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಬಂಧಿಸಿದಂತೆ ವಿಚಾರಣೆ ನಡೆಸಲು ಯಾವುದೇ ಅಧಿಕಾರ ಇಲ್ಲ ಎಂದು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಇತ್ತೀಚೆಗೆ ಹೊರಡಿಸಿದ ಮಧ್ಯಂತರ ತಡೆಯಾಜ್ಞೆಯಲ್ಲಿ ಹೇಳಿದರು.

ನಿರ್ದೇಶಕರಾದ ಪ್ರೊ.ಋಷಿಕೇಶ ಟಿ.ಕೃಷ್ಣನ್, ಡೀನ್ ಅಧ್ಯಾಪಕ ಪ್ರೊ.ದಿನೇಶ್ ಕುಮಾರ್ ಮತ್ತು ಇತರ ಅಧ್ಯಾಪಕರಾದ ಪ್ರೊ.ಶ್ರೀಲತಾ ಜೊನ್ನಲಗೆದ್ದ, ಪ್ರೊ.ರಾಹುಲ್ ಡಿ, ಪ್ರೊ. ಅಶಿಶ್ ಮಿಶಅರಾ ಮತ್ತು ಪ್ರೊ. ಚೇತನ್ ಸುಬ್ರಮಣಿಯನ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿತ್ತು. ಐಐಎಂಬಿಯ ಆಡಳಿತ ಮಂಡಳಿ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಸಲ್ಲಿಸಿದ ಅರ್ಜಿಗೆ ಜುಲೈ 18ರಂದು ತಡೆಯಾಜ್ಞೆ ನೀಡಲಾಗಿತ್ತು.

ಎಲ್ಲಾ ಅರ್ಜಿದಾರರು ಗೋಪಾಲ್ ದಾಸ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ DCREನ ಸಂಪೂರ್ಣ ಪ್ರಕ್ರಿಯೆಗಳನ್ನು ಪ್ರಶ್ನಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಜನವರಿ 2025 ರ ಎರಡನೇ ವಾರಕ್ಕೆ ಮುಂದೂಡಲಾಯಿತು.

ಈ ಮಧ್ಯೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿ ದಾಖಲಿಸಿರುವವರ ವಿರುದ್ಧ ನಿರ್ದೇಶಕರು ಮತ್ತು ಇತರರು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಅರ್ಜಿಯ ವಿಚಾರಣೆ ಇನ್ನಷ್ಟೇ ಬಾಕಿ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

Ranji Final: ಚೊಚ್ಚಲ ಪ್ರಶಸ್ತಿ ಗೆಲುವಿನ ಸನಿಹದಲ್ಲಿ ಜಮ್ಮು-ಕಾಶ್ಮೀರ; ತವರಿನಲ್ಲೇ ಕರ್ನಾಟಕಕ್ಕೆ ದೊಡ್ಡ ಹಿನ್ನಡೆ!

'S-400 ಸುದರ್ಶನ' ಕ್ಷಿಪಣಿಯ ಪರಾಕ್ರಮವನ್ನು ಜಗತ್ತಿಗೆ ತೋರಿಸಿದ IAF! ಈಗ Video ರಿಲೀಸ್ ಮಾಡಿದ್ದು ಯಾಕೆ?

ನಟಿ ಜೊತೆ ವಿಜಯ್ ಅನೈತಿಕ ಸಂಬಂಧ?: 27 ವರ್ಷದ ದಾಂಪತ್ಯ ಕಡಿದುಕೊಳ್ಳಲು ಮುಂದಾದ ಪತ್ನಿ; TN BJP ಅಧ್ಯಕ್ಷ ಹೇಳಿದ್ದೆ ನಿಜವಾಯ್ತಾ?

ತಮಿಳುನಾಡು: ವಿಧಾನಸಭಾ ಚುನಾವಣೆ ಸಿದ್ಧತೆಯಲ್ಲಿರುವ ವಿಜಯ್ ಗೆ ಸಂಕಷ್ಟ, ಡಿವೋರ್ಸ್ ಗಾಗಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸಂಗೀತಾ!

SCROLL FOR NEXT