ಸಂಸದ ತೇಜಸ್ವಿ ಸೂರ್ಯ online desk
ರಾಜ್ಯ

ಖ್ಯಾತ ಗಾಯಕಿ, ಭರತನಾಟ್ಯ ಕಲಾವಿದೆಯೊಂದಿಗೆ ಸಂಸದ Tejasvi Surya ವಿವಾಹ ನಿಶ್ಚಯ

ಶಾಸ್ತ್ರ ವಿಶ್ವವಿದ್ಯಾಲಯದಿಂದ ಬಯೋ ಇಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿಯನ್ನು ಪಡೆದಿರುವ ಗಾಯಕಿ ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ ಪದವಿ ಪಡೆದಿದ್ದಾರೆ.

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದ್ದು most eligible bachelor ಎನಿಸಿಕೊಂಡಿರುವ ಯುವ ರಾಜಕಾರಣಿ ಕೆಲವೇ ತಿಂಗಳಲ್ಲಿ ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ.

ತೇಜಸ್ವಿ ಅವರಿಗೆ ಹಲವಾರು ಸಂದರ್ಭಗಳಲ್ಲಿ ಮದುವೆಯ ಮಾಧ್ಯಮಗಳು ಪ್ರಶ್ನೆಗಳನ್ನು ಕೇಳುತ್ತಿದ್ದವು. ಈ ವಿಷಯದ ಬಗ್ಗೆ ಅವರು ಮಾತನಾಡಿದ್ದು ಕಡಿಮೆ. ಈಗ ತೇಜಸ್ವಿ ಸೂರ್ಯ ಅವರ ವಿವಾಹದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ.

ಚೆನ್ನೈ ಮೂಲದ ಗಾಯಕಿ, ಭರತನಾಟ್ಯ ಕಲಾವಿದಯೂ ಆಗಿರುವ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ತೇಜಸ್ವಿ ಸೂರ್ಯ ವರಿಸಲಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ಅವರ ಎರಡೂ ಕುಟುಂಬಗಳು ಈಗಾಗಲೇ ಮಾತುಕತೆ ನಡೆಸಿ ಮದುವೆಗೆ ಒಪ್ಪಿಗೆ ನೀಡಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಶಿವಶ್ರೀ ಸ್ಕಂದಪ್ರಸಾದ್

ಶಾಸ್ತ್ರ ವಿಶ್ವವಿದ್ಯಾಲಯದಿಂದ ಬಯೋ ಇಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿಯನ್ನು ಪಡೆದಿರುವ ಶಿವಶ್ರೀ ಸ್ಕಂದಪ್ರಸಾದ್, ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ ಪದವಿ ಪಡೆದಿದ್ದಾರೆ.

2025 ರ ಮಾರ್ಚ್ ನಲ್ಲಿ ತೇಜಸ್ವಿ ಸೂರ್ಯ-ಶಿವಶ್ರೀ ಸ್ಕಂದಪ್ರಸಾದ್ ವಿವಾಹ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌

JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್‌ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿಕೆ ಶಿವಕುಮಾರ್‌ ವ್ಯಂಗ್ಯ