ಜಯಪ್ರಕಾಶ್ ಹೆಗಡೆ 
ರಾಜ್ಯ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮತ್ತು ಇತರ ಐವರು ಸದಸ್ಯರ ಅಧಿಕಾರಾವಧಿಯನ್ನು ಫೆಬ್ರವರಿ 1 ರಿಂದ ಫೆಬ್ರವರಿ 29 ರವರೆಗೆ ಮತ್ತೊಂದು ತಿಂಗಳು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮತ್ತು ಇತರ ಐವರು ಸದಸ್ಯರ ಅಧಿಕಾರಾವಧಿಯನ್ನು ಫೆಬ್ರವರಿ 1 ರಿಂದ ಫೆಬ್ರವರಿ 29 ರವರೆಗೆ ಮತ್ತೊಂದು ತಿಂಗಳು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಹೆಗ್ಗಡೆಯವರ ಅಧಿಕಾರಾವಧಿಯು ನವೆಂಬರ್‌ನಲ್ಲಿ ಕೊನೆಗೊಂಡಿತು ಮತ್ತು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜನವರಿ 1 ರವರೆಗೆ ಅದನ್ನು ವಿಸ್ತರಿಸಿತು. ಸಿದ್ದರಾಮಯ್ಯ ಸರ್ಕಾರವು  ಜಾತಿ ಗಣತಿ ವರದಿ ಸ್ವೀಕರಿಸುವುದಾಗಿ ಹೇಳಿತ್ತು, ಆದರೆ ಅದನ್ನು ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ವಿರೋಧಿಸಿದವು.

ಜನವರಿ 28 ರಂದು ಚಿತ್ರದುರ್ಗದಲ್ಲಿ ನಡೆದ ‘ಶೋಷಿತರ ಸಮಾವೇಶ’ದಲ್ಲಿ ಸಿದ್ದರಾಮಯ್ಯ ಅವರು ವರದಿಯನ್ನು ಸರ್ಕಾರ ಒಪ್ಪಿಕೊಳ್ಳುತ್ತದೆ ಎಂದು ಪುನರುಚ್ಚರಿಸಿದರು. ತಾಕತ್ತಿದ್ದರೇ ಕಾಂಗ್ರೆಸ್ ಸರ್ಕಾರ ಈ ವರದಿಯನ್ನು  ಒಪ್ಪಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದರು.

ಹೆಗ್ಗಡೆಯವರ ಅವಧಿ ಮುಗಿಯುವ ಫೆಬ್ರವರಿ 29 ರ ಮೊದಲು ಸರ್ಕಾರ ವರದಿಯನ್ನು ಸ್ವೀಕರಿಸುತ್ತದೆಯೇ ಎಂದು ನೋಡಬೇಕು. ಸರ್ಕಾರವು ವರದಿಯನ್ನು ಅಂಗೀಕರಿಸಿದರೂ, ಅದು ವಿಧಾನಸಭೆಯಲ್ಲಿ ಮಂಡನೆಯಾಗದಿರಬಹುದು, ಏಕೆಂದರೆ ಇದು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್‌ಗೆ ಸಮಸ್ಯ ತಂದೊಡ್ಡಬಹುದು ಎಂದು ವಿಶ್ಲೇಷಕರು ಹೇಳಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಕೂಡ ವರದಿಯನ್ನು ಸರಕಾರ ಮಂಡಿಸುವ ವಿಶ್ವಾಸ ವ್ಯಕ್ತಪಡಿಸಿದರು. "ನಾವು ಸಮೀಕ್ಷೆಯ ವರದಿಯನ್ನು ವಿಶ್ಲೇಷಿಸಿದ್ದೇವೆ ಮತ್ತು ಅದನ್ನು ಮುದ್ರಣಕ್ಕೆ ಕಳುಹಿಸುವ ಮೊದಲು ಅಂತಿಮ ಸ್ಪರ್ಶ ನೀಡುತ್ತೇವೆ ಎಂದು ಅವರು ಹೇಳಿದರು.

ಹೆಗಡೆಯವರ ಕೋರಿಕೆಯ ಮೇರೆಗೆ ನಾವು ಆಯೋಗದ ಅವಧಿಯನ್ನು ವಿಸ್ತರಿಸಿದ್ದೇವೆ. ಆಯೋಗದ ಅಧ್ಯಕ್ಷರು ಕೇಳಿದಂತೆ ಕಾಲಾವಕಾಶ ನೀಡಬೇಕಲ್ಲವೇ’ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಆಯೋಗವು ಮೊದಲು ವರದಿಯನ್ನು ಸಲ್ಲಿಸಲಿ, ನಂತರ ಅದನ್ನು  ವಿಧಾನಸಭೆಯಲ್ಲಿ  ಮಂಡಿಸಬೇಕೆ  ಬೇಡವೇ ಎಂಬ ಬಗ್ಗೆ  ಸಿಎಂ ಸಿದ್ದರಾಮಯ್ಯ ನಿರ್ಧರಿಸುತ್ತಾರೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಸರ್ಕಾರ ತನ್ನ ಮೊದಲ ಅಧಿಕಾರಾವಧಿಯಲ್ಲಿ ಸಮೀಕ್ಷೆಗೆ ಚಾಲನೆ ನೀಡಿತ್ತು,  ಆಯೋಗದ ಅಧ್ಯಕ್ಷ ಕಾಂತರಾಜು 2018 ರಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಆದರೆ ಆಯೋಗದ ಸದಸ್ಯ ಕಾರ್ಯದರ್ಶಿ ಸಹಿ ಮಾಡದ ಕಾರಣ ಸರ್ಕಾರಕ್ಕೆ ಸಲ್ಲಿಸಲು ಸಾಧ್ಯವಾಗಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ