ಸಚಿವ ಕೃಷ್ಣ ಭೈರೇಗೌಡ 
ರಾಜ್ಯ

ಕಂದಾಯ ಇಲಾಖೆ ಎಲ್ಲಾ ಕಚೇರಿಗಳು ಶೀಘ್ರದಲ್ಲೇ ಡಿಜಿಟಲೀಕರಣಗೊಳ್ಳಲಿವೆ: ಸಚಿವ ಕೃಷ್ಣ ಭೈರೇಗೌಡ

ರಾಜ್ಯದ ಜನತೆಗೆ ತ್ವರಿತ ಮತ್ತು ಪಾರದರ್ಶಕ ಸೌಲಭ್ಯಗಳನ್ನು ಒದಗಿಸಲು ಕಂದಾಯ ಇಲಾಖೆ ಎಲ್ಲಾ ಕಚೇರಿಗಳನ್ನು ಶೀಘ್ರದಲ್ಲೇ ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.

ಬೆಳಗಾವಿ: ರಾಜ್ಯದ ಜನತೆಗೆ ತ್ವರಿತ ಮತ್ತು ಪಾರದರ್ಶಕ ಸೌಲಭ್ಯಗಳನ್ನು ಒದಗಿಸಲು ಕಂದಾಯ ಇಲಾಖೆ ಎಲ್ಲಾ ಕಚೇರಿಗಳನ್ನು ಶೀಘ್ರದಲ್ಲೇ ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ಕಂದಾಯ ಇಲಾಖೆಯಲ್ಲಿನ ಹಳೆಯ ದಾಖಲೆಗಳು ಶಿಥಿಲಾವಸ್ಥೆ ತಲುಪಿವೆ. ದಾಖಲೆ ಪಡೆಯಲು ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಆ ದಾಖಲೆಗಳನ್ನು ಶಾಶ್ವತವಾಗಿ ಸಂರಕ್ಷಿಸುವುದು ಮತ್ತು ನಕಲಿ ಸೃಷ್ಟಿಗೆ ತಡೆಯೊಡ್ಡುವ ಸಲುವಾಗಿ 31 ಜಿಲ್ಲೆಗಳ ತಲಾ ಒಂದು ತಾಲ್ಲೂಕಿನಲ್ಲಿ ಪ್ರಥಮ ಹಂತವಾಗಿ ಯೋಜನೆಗೆ ಚಾಲನೆ ಕೊಡಲಾಗುತ್ತಿದೆ. ಎಲ್ಲ ದಾಖಲೆಗಳನ್ನು 100 ದಿನಗಳಲ್ಲಿ ಡಿಜಿಟಲೀಕರಣ ಮಾಡಲಾಗುವುದು ಎಂದು ಹೇಳಿದರು.

ಕಂದಾಯ ಇಲಾಖೆಯಲ್ಲಿ ತಹಶೀಲ್ದಾರ್ ಅಧೀನದಲ್ಲಿರುವ ಪ್ರಕರಣಗಳನ್ನು ಮೂರು ತಿಂಗಳೊಳಗೆ ಇತ್ಯರ್ಥಪಡಿಸಬೇಕು ಮತ್ತು ಸಹಾಯಕ ಆಯುಕ್ತರು ಅಥವಾ ಜಿಲ್ಲಾಧಿಕಾರಿಗಳ ಅಧೀನದಲ್ಲಿರುವ ಪ್ರಕರಣಗಳನ್ನು ಆರು ತಿಂಗಳೊಳಗೆ ಪರಿಹರಿಸಬೇಕು ಎಂದು ಇದೇ ವೇಳೆ ಸೂಚನೆ ನೀಡಿದರು.

‘ನಾನು ಕಂದಾಯ ಸಚಿವನಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ತಹಶೀಲ್ದಾರ್, ಸಹಾಯಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿನ ಹೆಚ್ಚಿನ ಪ್ರಕರಣ ಬಾಕಿ ಇದ್ದವು. ಈಗ ತ್ವರಿತವಾಗಿ ಪ್ರಕರಣ ಇತ್ಯರ್ಥ ಮಾಡಲಾಗುತ್ತಿದೆ. ತಹಶೀಲ್ದಾರ್ ನ್ಯಾಯಾಲಯದಲ್ಲಿ ಬಾಕಿ ಇದ್ದ 2,215 ಪ್ರಕರಣಗಳಲ್ಲಿ ಈಗ 107 ಮಾತ್ರ ಉಳಿದಿವೆ. ಸಹಾಯಕ ಆಯುಕ್ತರ ನ್ಯಾಯಾಲಯಗಳಲ್ಲಿನ 60 ಸಾವಿಕ್ಕೂ ಅಧಿಕ ಪ್ರಕರಣಗಳಲ್ಲಿ 34,377 ಇತ್ಯರ್ಥವಾಗಿವೆ’ ಎಂದರು.

ಭೂಮಿಯನ್ನು ಸರ್ವೆ ಮಾಡಲು ಅಗತ್ಯವಿರುವ ಹೈಟೆಕ್ ಉಪಕರಣಗಳ ಕಿಟ್‌ಗಳನ್ನು ಪ್ರತಿ ತಾಲೂಕು ಆಡಳಿತಕ್ಕೆ ಒದಗಿಸಲಾಗುವುದು. ಭೂಮಾಪನ ನಡೆಸಲು ಸಿಬ್ಬಂದಿ ಕೊರತೆ ಇದೆ, ಆ ಕಾರ್ಯಕ್ಕೆ 1000ಕ್ಕೂ ಹೆಚ್ಚು ಭೂಮಾಪಕರನ್ನು ಶೀಘ್ರದಲ್ಲೇ ನೇಮಿಸಲಾಗುವುದು, ಮೊದಲ ಹಂತದಲ್ಲಿ 367 ಭೂಮಾಪಕರನ್ನು ನೇಮಿಸಲಾಗುವುದು.

ಸರ್ವೇಯರ್‌ಗಳ ನೇಮಕಾತಿಯನ್ನು ಕೆಪಿಎಸ್‌ಸಿ ಪರೀಕ್ಷೆ ಮೂಲಕ ಮಾಡಲಾಗುತ್ತಿದೆ. ಖಾಲಿ ಇರುವ ಇತರೆ ಹುದ್ದೆಗಳನ್ನೂ ಶೀಘ್ರದಲ್ಲೇ ಸರ್ಕಾರ ಭರ್ತಿ ಮಾಡಲಿದೆ ಎಂದರು.

ತಹಶೀಲ್ದಾರ್ ಕಚೇರಿ, ಸರ್ವೆ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿಗಳ ದಾಖಲೆ ಕೊಠಡಿಗಳಲ್ಲಿ ಎಲ್ಲ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ‘ಭೂ ಸುರಕ್ಷಾ’ ಕಾರ್ಯಕ್ರಮವನ್ನು ಪ್ರತಿ ಜಿಲ್ಲೆಯಲ್ಲಿ ಒಂದೊಂದು ತಾಲೂಕಿನಲ್ಲಿ ಆರಂಭಿಸಲಾಗುವುದು. ಡಿಜಿಟಲೀಕರಣದಿಂದ ದಾಖಲೆಗಳ ಕಳ್ಳತನ, ನಾಪತ್ತೆ ಅಥವಾ ದುರ್ಬಳಕೆ ಆಗುವುದನ್ನು ತಡೆಯಬಹುದು. ಜನರು ಕಚೇರಿಗಳಿಗೆ ಬರುವುದಕ್ಕಿಂತ ಆನ್‌ಲೈನ್‌ನಲ್ಲಿ ದಾಖಲೆಗಳನ್ನು ಪರಿಶೀಲಿಸಬಹುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT