ಸಂಗ್ರಹ ಚಿತ್ರ 
ರಾಜ್ಯ

ಕರ್ತವ್ಯ ಲೋಪ: ಕಂದಾಯ ಇಲಾಖೆಯ 6 ಮಂದಿ ಅಧಿಕಾರಿಗಳು ಅಮಾನತು

ಕರ್ತವ್ಯ ಲೋಪ ಆರೋಪದಡಿ ಬೊಮ್ಮನಹಳ್ಳಿ ಬಿಬಿಎಂಪಿ ವಲಯದ ಆರು ಮಂದಿ ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಮುನೀಷ್ ಮುದ್ಗಿಲ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಕರ್ತವ್ಯ ಲೋಪ ಆರೋಪದಡಿ ಬೊಮ್ಮನಹಳ್ಳಿ ಬಿಬಿಎಂಪಿ ವಲಯದ ಆರು ಮಂದಿ ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಮುನೀಷ್ ಮುದ್ಗಿಲ್ ಆದೇಶ ಹೊರಡಿಸಿದ್ದಾರೆ.

ಬೊಮ್ಮನಹಳ್ಳಿ ವಲಯದಲ್ಲಿ ಆಸ್ತಿ ತೆರಿಗೆ ಸಂಬಂಧಿತ ಲೋಪಗಳ ಹಿನ್ನೆಲೆಯಲ್ಲಿ ಜಂಟಿ ಆಯುಕ್ತ ಅಜಿತ್ ಅವರಿಗೆ ಕಾರಣ ಕೇಳಿ ನೋಟಿಸ್ ಹಾಗೂ ಕಂದಾಯ ಉಪಆಯುಕ್ತ ಡಿಕೆ ಬಾಬು ಅವರ ವಿರುದ್ಧ ಇಲಾಖೆ ವಿಚಾರಣೆ ನಡೆಸುವಂತೆ ಸೂಚಿಸಿದ್ದಾರೆ.

ಜ.30 ರಂದು ಬೊಮ್ಮನಹಳ್ಳಿ ವಲಯದಲ್ಲಿ ಆಸ್ತಿ ತೆತಿಗೆ ಸಂಗ್ರಹ, ತೆರಿಗೆ ಬಾಕಿ, ಟಾಪ್ 50 ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಗೃಹ ಹಾಗೂ ಗೃಹೇತರ ಕಟ್ಟಡಗಳ ಮಾಲೀಕರ ಆಸ್ತಿಗಳನ್ನು ಮುಟ್ಟುಗೋಲು ಹಾಗೂ ಬೀಗಮುದ್ರೆ ಹಾಕದ ಪ್ರಕರಣಗಳು ಪರಿಶೀಲನೆ ವೇಳೆ ಕಂಡು ಬಂದಿದ್ದವು.

ಈ ಹಿನ್ನೆಲೆಯಲ್ಲಿ ಜಂಟಿ ಆಯುಕ್ತರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲು ಹಾಗೂ ಡಿಸಿ ಡಿಕೆ ಬಾಬು ಅವರ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ್ದಾರೆ.

“ಡಿಸಿ ಡಿಕೆ ಬಾಬು ಕಳೆದ ಎರಡು ತಿಂಗಳಲ್ಲಿ ಟಾಪ್-50 ಗೃಹೇತರ ಕಟ್ಟಡಗಳಲ್ಲಿ ಒಂದು ಕಟ್ಟಡವನ್ನು ಸೀಲ್ ಮಾಡಿಲ್ಲ. ಅದೇ ರೀತಿ ಟಾಪ್ -50 ವಸತಿ ಕಟ್ಟಡಗಳಲ್ಲಿ ಒಂದು ಆಸ್ತಿಯನ್ನು ಅಟ್ಯಾಚ್ ಮೆಂಟ್ ಮಾಡಿಲ್ಲ. ಈ ಕುರಿತಂತೆ ಡಿಕೆ ಬಾಬು ವಿರುದ್ಧ ಇಲಾಖಾ ವಿಚಾರಣೆ ನಡೆಸಬೇಕಿದೆ” ಎಂದು ವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT