ಕಲಾವಿದ ಅರುಣ್ ಸಾಗರ್ ವಿನ್ಯಾಸಗೊಳಿಸಿರುವ ಉತ್ಸವದ ಮುಖ್ಯ ವೇದಿಕೆ ಗಾಯತ್ರಿ ಪೀಠ. 
ರಾಜ್ಯ

3 ದಿನಗಳ ಹಂಪಿ ಉತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

ಹಂಪಿ ಉತ್ಸವ -2024ಕ್ಕೆ ವಿಶ್ವ ಪಾರಂಪರಿಕ ತಾಣ ಹಂಪಿ ಮತ್ತು ಹೊಸಪೇಟೆ ಸಿಂಗರಿಸಿಕೊಂಡಿದ್ದು, ಮೂರು ದಿನಗಳ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಲಿದ್ದಾರೆ.

ಹಂಪಿ/ಹೊಸಪೇಟೆ: ಹಂಪಿ ಉತ್ಸವ -2024ಕ್ಕೆ ವಿಶ್ವ ಪಾರಂಪರಿಕ ತಾಣ ಹಂಪಿ ಮತ್ತು ಹೊಸಪೇಟೆ ಸಿಂಗರಿಸಿಕೊಂಡಿದ್ದು, ಮೂರು ದಿನಗಳ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಲಿದ್ದಾರೆ.

ಫೆ. 2ರಂದು ಗಾಯತ್ರಿ ಪೀಠ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಹಂಪಿ ನೆಲದ ವೈಭವವನ್ನು ಜಗತ್ತಿಗೆ ಮತ್ತೊಮ್ಮೆ ಸಾರಲು ಉತ್ಸವಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ.

ಉತ್ಸವಕ್ಕೆ ಹಂಪಿಯಲ್ಲಿ ನಾಲ್ಕು ವೇದಿಕೆಗಳನ್ನು ನಿರ್ಮಿಸಲಾಗಿದ್ದು, ಈ ವೇದಿಕೆಗಳಲ್ಲಿ ಹಾಗೂ ಜಾನಪದವಾಹಿನಿ ಮತ್ತು ಧ್ವನಿ ಮತ್ತು ಬೆಳಕು ಕಾರ್ಯಕ್ರಮದಲ್ಲಿ ಐದು ಸಾವಿರ ಕಲಾವಿದರು ಈ ನೆಲದ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ಉಣಬಡಿಸಲಿದ್ದಾರೆ. ಉತ್ಸವಕ್ಕೆ 10ಲಕ್ಷ ಜನರು ಆಗಮಿಸುವ ನಿರೀಕ್ಷೆಗಳಿವೆ.

ಉತ್ಸವಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸೂಕ್ತ ಭದ್ರತೆ ಹಾಗೂ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ವಿಜಯನಗರ ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ಸವದ ಅಂಗವಾಗಿ ಗುರುವಾರ ಹಂಪಿ ಬೈ ಸ್ಕೈ ಹೆಲಿಕಾಪ್ಟರ್ ಯಾನಕ್ಕೆ ಚಾಲನೆ ನೀಡಲಾಯಿತು. ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡುವ ವೇಳೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕನ್ನಡ ಮತ್ತು ಸಾಂಸ್ಕೃತಿಕ ಸಚಿವ ಶಿವರಾಜ್ ತಂಗಡಗಿ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT