ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ನಾಟಿ ಕೋಳಿ ಸಾರು ಜೊತೆ ಮದ್ಯ ಸೇವನೆ, ಬೇಡ ಎಂದ ಪುತ್ರನ ಹತ್ಯೆಗೈದ ತಂದೆ!

ನಾಟಿ ಕೋಳಿ ಸಾರು ಜೊತೆ ಮದ್ಯ ಸೇವನೆ ಮಾಡಲು ಬಿಡದ ಕಾರಣಕ್ಕೆ ತಂದೆಯೊಬ್ಬ ತನ್ನ ಮಗನನ್ನೇ ಹತ್ಯೆ ಮಾಡಿರುವ ಘಟನೆಯೊಂದು ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ಬೆಂಗಳೂರು: ನಾಟಿ ಕೋಳಿ ಸಾರು ಜೊತೆ ಮದ್ಯ ಸೇವನೆ ಮಾಡಲು ಬಿಡದ ಕಾರಣಕ್ಕೆ ತಂದೆಯೊಬ್ಬ ತನ್ನ ಮಗನನ್ನೇ ಹತ್ಯೆ ಮಾಡಿರುವ ಘಟನೆಯೊಂದು ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ಗೋವಿಂದರಾಜು ಮೃತ ದುರ್ದೈವಿ. ಹತ್ಯೆ ಮಾಡಿದಾತನನ್ನು ನಾಗರಾಜು ಅಲಿಯಾಸ್ ವೆಂಕಟರಾಜು ಎಂದು ಗುರ್ತಿಸಲಾಗಿದೆ.

ಮದ್ಯದ ಚಟಕ್ಕೆ ಬಿದ್ದಿದ್ದ ನಾಗರಾಜು, ಮದ್ಯ ಸೇವನೆ ಮಾಡು ಪತ್ನಿ ಗೌರಮ್ಮಗೆ ನಾಟಿಕೋಳಿ ಸಾರು ಮಾಡುವಂತೆ ತಿಳಿಸಿದ್ದಾನೆ. ಇದಕ್ಕೆ ಬೇಸರಗೊಂಡ ಪುತ್ರ ಗೋವಿಂದರಾಜು ಅಡುಗೆ ಮಾಡದಂತೆ ತಾಯಿಯನ್ನು ತಡೆದಿದ್ದಾನೆ.

ಈ ವೇಳೆ ಕೆಂಡಾಮಂಡಲಗೊಂಡಿರುವ ನಾಗರಾಜು ಪುತ್ರ ಗೋವಿಂದರಾಜುಗೆ ಹೊಡೆದು ನಿಂದಿಸಿದ್ದಾನೆ. ಬಳಿಕ ಮನೆಯಿಂದ ಹೊರಗೆ ಹೋಗಿದ್ದಾನೆ. ಮಧ್ಯರಾತ್ರಿ 12.30ರ ಸುಮಾರಿಗೆ ಮರಳಿ ಮನೆಗೆ ಬಂದಿರುವ ಆರೋಪಿ, ಪುತ್ರ ಮಲಗಿರುವುದನ್ನು ನೋಡಿ ಕಲ್ಲು ತಂದು ತಲೆ ಮೇಲೆ ಎತ್ತಿ ಹಾಕಿದ್ದಾನೆ. ಶಬ್ಧ ಕೇಳಿದ ಗೌರಮ್ಮ ನಿದ್ರೆಯಿಂದ ಎದ್ದು, ಕೂಗಿಕೊಂಡಿದ್ದಾರೆ.

ಕೂಡಲೇ ಸ್ಥಳೀಯರ ನೆರವಿನೊಂದಿಗೆ ಪುತ್ರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ವೈದ್ಯರು ಬದುಕುಳಿಯುವ ಸಾಧ್ಯತೆ ಅತ್ಯಂತ ವಿರಳ ಎಂದು ಹೇಳಿದರೂ ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸಲು ಮುಂದಾಗಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಗೋವಿಂದರಾಜು ಅವರು ಕೊನೆಯುಸಿರೆಳೆದಿದ್ದಾರೆ. ಈ ನಡುವೆ ಪುತ್ರನನ್ನು ಹತ್ಯೆ ಮಾಡಿದ ನಾಗರಾಜು ಪೊಲೀಸರ ಮುಂದೆ ಶರಣಾಗಿದ್ದಾನೆ.

ಆರೋಪಿ ನಾಗರಾಜು ಹಾಗೂ ಈನತ ಪತ್ನಿ ಗೌರಮ್ಮ ಅವರಿಗೆ ಮತ್ತೊಬ್ಬ ಮಗನಿದ್ದ. ಆದರೆ, ಕ್ಯಾನ್ಸರ್ ನಿಂದಾಗಿ ಆತ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT