ಸುರೇಶ್ 
ರಾಜ್ಯ

ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾ ಸಿಬ್ಬಂದಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾ ಸಿಬ್ಬಂದಿಯೊಬ್ಬರ ಶವ ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ರಾಮನಗರ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾ ಸಿಬ್ಬಂದಿಯೊಬ್ಬರ ಶವ ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತಾಲೂಕು ಕಚೇರಿಯ ಚುನಾವಣಾ ಶಾಖೆ ಕೊಠಡಿಯಲ್ಲಿ ಶಿರಸ್ತೇದಾರ್ ಸುರೇಶ್(45) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾದ್ದರಿಂದ ಕನಕಪುರ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. 

ಘಟನಾ ಸ್ಥಳಕ್ಕೆ ರಾಮನಗರ ಎಸ್ ಪಿ ಕಾರ್ತಿಕ್ ರೆಡ್ಡಿ ಹಾಗೂ ಕನಕಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಡೆತ್ ನೋಟ್ ಸಿಕ್ಕಿದ್ದು, ಅದನ್ನು ಕೂಡ ಪರಿಶೀಲನೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT