ಅಶೋಕ್ ರಾಜ್ ಕಾಡಬೆಟ್ಟು 
ರಾಜ್ಯ

ಉಡುಪಿ: ಖ್ಯಾತ ಹುಲಿ ವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ವಿಧಿವಶ

ಖ್ಯಾತ ಹುಲಿ ವೇಷದಾರಿ ಅಶೋಕ್ ರಾಜ್ ಅವರು ಮೃತಪಟ್ಟಿದ್ದಾರೆ. ಮಹಾನವಮಿ ಸಂದರ್ಭದ ಸಾಂಪ್ರದಾಯಿಕ ಹುಲಿ ವೇಷಕ್ಕೆ ಹೊಸ ಆಯಾಮ ನೀಡಿದ್ದ ಖ್ಯಾತ ಕಲಾವಿದರಾಗಿದ್ದ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಮೃತರಾಗಿದ್ದಾರೆ, ಅವರಿಗೆ 56 ವರ್ಷ ವಯಸ್ಸಾಗಿತ್ತು.

ಉಡುಪಿ: ಖ್ಯಾತ ಹುಲಿ ವೇಷದಾರಿ ಅಶೋಕ್ ರಾಜ್ ಅವರು ಮೃತಪಟ್ಟಿದ್ದಾರೆ. ಮಹಾನವಮಿ ಸಂದರ್ಭದ ಸಾಂಪ್ರದಾಯಿಕ ಹುಲಿ ವೇಷಕ್ಕೆ ಹೊಸ ಆಯಾಮ ನೀಡಿದ್ದ ಖ್ಯಾತ ಕಲಾವಿದರಾಗಿದ್ದ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಮೃತರಾಗಿದ್ದಾರೆ, ಅವರಿಗೆ 56 ವರ್ಷ ವಯಸ್ಸಾಗಿತ್ತು.

ಉಡುಪಿಯ ಕಾಡುಬೆಟ್ಟು ನಿವಾಸಿಯಾದ ಅಶೋಕ್ ರಾಜ್, ಉಡುಪಿ ಅಷ್ಟಮಿ ಹಾಗೂ ವಿಟ್ಲಪಿಂಡಿಯ ವೇಳೆ ತಮ್ಮ ತಂಡದ ಜೊತೆಗೆ ಹುಲಿ ವೇಷ ಧರಿಸಿ ಹವಾ ಸೃಷ್ಟಿಸುತ್ತಿದ್ದರು. ಕಳೆದ ಮೂರು ದಶಕಗಳಲ್ಲಿ ಹುಲಿ ವೇಷಧಾರಿಯಾಗಿ ಪ್ರಸಿದ್ಧರಾಗಿದ್ದ ಅವರು ಹುಲಿ ವೇಷವನ್ನು ರಾಜ್ಯ ಮತ್ತು ದೇಶಾದ್ಯಂತ ಪ್ರಚಾರಪಡಿಸಿದ್ದರು. ಅವರಿಂದ ಪ್ರೇರಣೆ ಪಡೆದ ನೂರಾರು ಮಂದಿ ಹುಲಿ ಕುಣಿತವನ್ನು ಸ್ಫೂರ್ತಿಯಾಗಿ ಮಾಡಿಕೊಂಡಿದ್ದರು.

ಅಶೋಕ್ ರಾಜ್ ಕಾಡುಬೆಟ್ಟು ಅವರ ಇಡೀ ಕುಟುಂಬವೇ ಹುಲಿವೇಷಕ್ಕೆ ಮುಡಿಪಾಗಿತ್ತು. ನಟಿ ಸುಷ್ಮಾ ರಾಜ್, ಅಶೋಕ್ ರಾಜ್ ಕಾಡುಬೆಟ್ಟು ಅವರ ಮಗಳು. ಅಶೋಕ್‌ ಅವರು ಕಳೆದ ಬಾರಿ ನವರಾತ್ರಿಯ ಸಂದರ್ಭ ಬೆಂಗಳೂರಿನಲ್ಲಿ ಹುಲಿವೇಷ ಧರಿಸಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾಗ ಅಸ್ವಸ್ಥರಾಗಿ, ಬಳಿಕ ಆಸ್ಪತ್ರೆ ಸೇರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT