ಪ್ರೇಮಿಗಳ ಆತ್ಮಹತ್ಯೆ 
ರಾಜ್ಯ

ಕಲಬುರಗಿ: ವರಸೆಯಲ್ಲಿ ಅಣ್ಣ-ತಂಗಿ, ಪ್ರೀತಿಗೆ ಪೋಷಕರ ವಿರೋಧ; ವಿವಾಹವಾಗಿ ಪ್ರೇಮಿಗಳ ಆತ್ಮಹತ್ಯೆ!

ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ಜಮೀನಿನಲ್ಲಿಯೇ ಮದುವೆಯಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡ್ರಾಮಿ ತಾಲೂಕಿನ‌ ಮಾಗಣಗೇರಾ ಗ್ರಾಮದಲ್ಲಿ ನಡೆದಿದೆ.

ಯಡ್ರಾಮಿ: ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ಜಮೀನಿನಲ್ಲಿಯೇ ಮದುವೆಯಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡ್ರಾಮಿ ತಾಲೂಕಿನ‌ ಮಾಗಣಗೇರಾ ಗ್ರಾಮದಲ್ಲಿ ನಡೆದಿದೆ.

ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದ ಶಶಿಕಲಾ ತಂದೆ ಸಿದ್ದಪ್ಪ(18)  ಹಾಗೂ  ಇದೇ ಗ್ರಾಮದ ಗೊಲ್ಲಾಳ ತಂದೆ ಮರಿಲಿಂಗಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಇವರಿಬ್ಬರು ವರಸೆಯಲ್ಲಿ ಅಣ್ಣಚ-ತಂಗಿಯಾಗಿದ್ದರು ಎನ್ನಲಾಗಿದೆ.

ಮನೆಯವರ ವಿರೋಧದ ನಡುವೆ ಶುಕ್ರವಾರ ರಾತ್ರಿ ಪ್ರೇಮಿಗಳು ಮದುವೆ ಮಾಡಿಕೊಂಡಿದ್ದಾರೆ. ನಂತರ ಕೆಲವೇ ಗಂಟೆಗಳಲ್ಲಿ ಊರಿನ  ಹೊರವಲಯದ ಗೊಲ್ಲಾಳ ತಂದೆ ಮರಿಲಿಂಗಪ್ಪ ಅವರ ಜಮೀನಿನಲ್ಲಿರುವ ಮರಕ್ಕೆ ಇಬ್ಬರೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ ತಿಂಗಳು ಮದುವೆ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT