ಮೋಹನ್‌ ಭಾಗವತ್‌ 
ರಾಜ್ಯ

ಕಲೆ ಜನರ ಗ್ರಹಿಕೆಯನ್ನು ಬದಲಾಯಿಸಬಲ್ಲದು: ಮೋಹನ್‌ ಭಾಗವತ್‌

ಜನರ ಗ್ರಹಿಕೆಯನ್ನು ಬದಲಾಯಿಸುವ ಹಾಗೂ ವಿಶ್ವ ಕಲೆಗಳಿಗೆ ದಾರಿ ಮಾಡಿಕೊಡುವ ಸಾಮರ್ಥ್ಯ ಭಾರತೀಯ ಕಲೆಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಶನಿವಾರ ಹೇಳಿದರು.

ಬೆಂಗಳೂರು: ಜನರ ಗ್ರಹಿಕೆಯನ್ನು ಬದಲಾಯಿಸುವ ಹಾಗೂ ವಿಶ್ವ ಕಲೆಗಳಿಗೆ ದಾರಿ ಮಾಡಿಕೊಡುವ ಸಾಮರ್ಥ್ಯ ಭಾರತೀಯ ಕಲೆಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಶನಿವಾರ ಹೇಳಿದರು.

ಬೆಂಗಳೂರಿನ ಅಖಿಲ ಭಾರತೀಯ ಕಲಾಸಾಧಕ ಸಂಗಮದಲ್ಲಿ ನಡೆದ ಸಮಾರಂಭದಲ್ಲಿ ಜನಪದ ಕಲಾವಿದರಾದ ಗಣಪತ್ ಸಖಾರಾಮ್ ಮಸಗೆ ಮತ್ತು ಚಿತ್ರ ಕಲಾವಿದ ವಿಜಯ ದಶರಥ್ ಆಚ್ರೆಕರ್ ಅವರಿಗೆ ಪ್ರಥಮ ವರ್ಷದ ‘ಭರತ ಮುನಿ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್ ಅವರು, 75 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಭಾರತೀಯ ಕಲೆಗಳನ್ನು ಅಭ್ಯಾಸ ಮಾಡುವ ಮತ್ತು ಸಮಾಜಕ್ಕೆ ಪರಿಚಯಿಸುವ ಸಾಧಕರನ್ನು ಗುರುತಿಸಿ ಗೌರವಿಸಲು ಈ ರೀತಿಯ ಉಪಕ್ರಮವನ್ನು ಕೈಗೊಳ್ಳಲಾಗಿದೆ. ‘ಕಲೆ ಒಂದು ವಿದ್ಯೆಯಾಗಿದ್ದು, ಅಂತ್ಯದಲ್ಲಿ ನಮ್ಮ ಮುಕ್ತಿಗೂ ಕಾರಣವಾಗುತ್ತದೆ. ಕಲೆ ಜನರ ಗ್ರಹಿಕೆಯನ್ನು ಬದಲಾಯಿಸಬಲ್ಲದು. ವಿಕಾರಗಳಿಂದ ನಮ್ಮನ್ನು ಮೇಲಕ್ಕೆತ್ತಿ ಸಮಾಜದ ವಿಚಾರ, ಸಂವೇದನೆಗಳನ್ನು ಅರ್ಥ ಮಾಡಿಸಿಕೊಡಲು ಕಲೆ ಪ್ರಮುಖ ಪಾತ್ರ ವಹಿಸುತ್ತದೆ, ಭಾರತೀಯತೆಯನ್ನು ಉಳಿಸುವ ಕೆಲಸವನ್ನು ಕಲೆಯ ಮೂಲಕ ಕಲಾವಿದರು ಮಾಡುತ್ತಿದ್ದಾರೆ. ಅವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT