ಮೋಹನ್‌ ಭಾಗವತ್‌ 
ರಾಜ್ಯ

ಕಲೆ ಜನರ ಗ್ರಹಿಕೆಯನ್ನು ಬದಲಾಯಿಸಬಲ್ಲದು: ಮೋಹನ್‌ ಭಾಗವತ್‌

ಜನರ ಗ್ರಹಿಕೆಯನ್ನು ಬದಲಾಯಿಸುವ ಹಾಗೂ ವಿಶ್ವ ಕಲೆಗಳಿಗೆ ದಾರಿ ಮಾಡಿಕೊಡುವ ಸಾಮರ್ಥ್ಯ ಭಾರತೀಯ ಕಲೆಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಶನಿವಾರ ಹೇಳಿದರು.

ಬೆಂಗಳೂರು: ಜನರ ಗ್ರಹಿಕೆಯನ್ನು ಬದಲಾಯಿಸುವ ಹಾಗೂ ವಿಶ್ವ ಕಲೆಗಳಿಗೆ ದಾರಿ ಮಾಡಿಕೊಡುವ ಸಾಮರ್ಥ್ಯ ಭಾರತೀಯ ಕಲೆಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಶನಿವಾರ ಹೇಳಿದರು.

ಬೆಂಗಳೂರಿನ ಅಖಿಲ ಭಾರತೀಯ ಕಲಾಸಾಧಕ ಸಂಗಮದಲ್ಲಿ ನಡೆದ ಸಮಾರಂಭದಲ್ಲಿ ಜನಪದ ಕಲಾವಿದರಾದ ಗಣಪತ್ ಸಖಾರಾಮ್ ಮಸಗೆ ಮತ್ತು ಚಿತ್ರ ಕಲಾವಿದ ವಿಜಯ ದಶರಥ್ ಆಚ್ರೆಕರ್ ಅವರಿಗೆ ಪ್ರಥಮ ವರ್ಷದ ‘ಭರತ ಮುನಿ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್ ಅವರು, 75 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಭಾರತೀಯ ಕಲೆಗಳನ್ನು ಅಭ್ಯಾಸ ಮಾಡುವ ಮತ್ತು ಸಮಾಜಕ್ಕೆ ಪರಿಚಯಿಸುವ ಸಾಧಕರನ್ನು ಗುರುತಿಸಿ ಗೌರವಿಸಲು ಈ ರೀತಿಯ ಉಪಕ್ರಮವನ್ನು ಕೈಗೊಳ್ಳಲಾಗಿದೆ. ‘ಕಲೆ ಒಂದು ವಿದ್ಯೆಯಾಗಿದ್ದು, ಅಂತ್ಯದಲ್ಲಿ ನಮ್ಮ ಮುಕ್ತಿಗೂ ಕಾರಣವಾಗುತ್ತದೆ. ಕಲೆ ಜನರ ಗ್ರಹಿಕೆಯನ್ನು ಬದಲಾಯಿಸಬಲ್ಲದು. ವಿಕಾರಗಳಿಂದ ನಮ್ಮನ್ನು ಮೇಲಕ್ಕೆತ್ತಿ ಸಮಾಜದ ವಿಚಾರ, ಸಂವೇದನೆಗಳನ್ನು ಅರ್ಥ ಮಾಡಿಸಿಕೊಡಲು ಕಲೆ ಪ್ರಮುಖ ಪಾತ್ರ ವಹಿಸುತ್ತದೆ, ಭಾರತೀಯತೆಯನ್ನು ಉಳಿಸುವ ಕೆಲಸವನ್ನು ಕಲೆಯ ಮೂಲಕ ಕಲಾವಿದರು ಮಾಡುತ್ತಿದ್ದಾರೆ. ಅವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT