ಸಂಗ್ರಹ ಚಿತ್ರ 
ರಾಜ್ಯ

ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಸಂತೋಷ್‌ ರಾವ್‌ಗೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವಿಶೇಷ (ಮಕ್ಕಳ) ನ್ಯಾಯಾಲಯವು ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ್ದನ್ನು ಬದಿಗೆ ಸರಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ್‌ ರಾವ್‌ ಅವರನ್ನು 2023ರ ಜೂನ್‌ 16ರಂದು ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ವಿಜಯಕುಮಾರ್‌ ಎ. ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಘಟನೆ ನಡೆದಿತ್ತು. ಪ್ರಕರಣವನ್ನು ಮೊದಲಿಗೆ ಬೆಳ್ತಂಗಡಿ ಠಾಣಾ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. 2013ರ ನವೆಂಬರ್‌ 6ರಂದು ಸರ್ಕಾರವು ಸಿಬಿಐಗೆ ತನಿಖೆಗೆ ಆದೇಶಿಸಿತ್ತು. ತನಿಖಾಧಿಕಾರಿಗಳು ಕಾರ್ಕಳ ಮೂಲದ ಸಂತೋಷ್ ರಾವ್ ಎಂಬಾತನನ್ನು ಆರೋಪಿಯಾಗಿ ಗುರುತಿಸಿದ್ದರು.

ಆದರೆ, ಪ್ರಕರಣದ ವಿಚಾರಣೆಯ ನಂತರ ಸಿಬಿಐ ವಿಶೇಷ ನ್ಯಾಯಾಲಯವು 2023ರ ಜುಲೈ 16ರಂದು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಇದರಿಂದ ವಿವಿಧ ಸಂಘಟನೆಗಳು ರಾಜಕೀಯ ಪಕ್ಷಗಳು ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು. ಹೀಗಾಗಿ, ಮರು ತನಿಖೆಗೆ ಆದೇಶಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ಪೀಠವು ಪ್ರಕರಣದಲ್ಲಿ ಸರ್ಕಾರ, ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬವು ಆರೋಪಿಯನ್ನು ದೋಷಮುಕ್ತಗೊಳಿಸಿದ ವಿಚಾರಣಾಧೀನ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್