ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನೆಲಮಂಗಲದಲ್ಲಿ ಯುವತಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ಆರೋಪದ ಮೇಲೆ ಬೀದರ್ ಮೂಲದ ಯುವಕನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪೊಲೀಸರು​ ಬಂಧಿಸಿದ್ದಾರೆ.

ಬೆಂಗಳೂರು: ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ಆರೋಪದ ಮೇಲೆ ಬೀದರ್ ಮೂಲದ ಯುವಕನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪೊಲೀಸರು​ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೀದರ್ ಮೂಲದ ಯುವಕ ಶಿವಕುಮಾರ್ ಹೊಸಳ್ಳಿ(25) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ವಾಸವಾಗಿರುವ ಶಿವಕುಮಾರ್, ಆರು ವರ್ಷದ ಹಿಂದೆ(2018) ಉಡುಪಿಯಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಯುವತಿಗೆ ಪರಿಚಯವಾಗಿದ್ದು, ಬಳಿಕ ಯುವತಿ ತಾಯಿ ಬಳಿ ಮೊಬೈಲ್ ನಂಬರ್ ತೆಗೆದುಕೊಂಡು ಮೆಸೇಜ್ ಮಾಡಲು ಆರಂಭಿಸಿದ್ದಾನೆ. 

2018ರ ಮಾರ್ಚ್​​ನಲ್ಲಿ ನೆಲಮಂಗಲದಲ್ಲಿರುವ ಯುವತಿ ಮನೆಗೆ ಶಿವಕುಮಾರ್​ ಹೋಗಿದ್ದು, ಈ ವೇಳೆ ಯುವತಿ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ಯುವತಿ ಮೇಲೆ ಅತ್ಯಾಚರವೆಸಗಿದ್ದಾನೆ. ಅಲ್ಲದೆ ಯುವತಿಗೆ ಗೊತ್ತಿಲ್ಲದಹಾಗೆ ಫೋನಿನಲ್ಲಿ ಫೋಟೋ ತೆಗೆದು, ವಿಡಿಯೋ ಮಾಡಿಕೊಂಡಿದ್ದಾನೆ. 

ಬಳಿಕ ಈ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ, ಹಲವಾರು ಬಾರಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಸಂತ್ರಸ್ತೆಯಿಂದ 85,000 ಹಣವನ್ನು ಶಿವಕುಮಾರ್​ ಪಡೆದುಕೊಂಡಿದ್ದಾನೆ. ಬಳಿಕ ಸಂತ್ರಸ್ತೆಯ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸಂತ್ರಸ್ತೆಯ ಚಿಕ್ಕಪ್ಪನ ಮಗಳ ಮೊಬೈಲ್​ಗೆ ಕಳಸಿದ್ದಾನೆ ಎಂದು ಆರೋಪಿಸಲಾಗಿದೆ.

ಕಳೆದ ಜನವರಿ 30 ರಂದು ಸಂತ್ರಸ್ತೆ ಮತ್ತು ಅವರ ತಂದೆ-ತಾಯಿ ಎಲ್ಲರೂ ನೆಲಮಂಗಲದ ಗಣೇಶನ ಗುಡಿ ದೇವಸ್ಥಾನಕ್ಕೆ ಹೋದಾಗ, ಶಿವಕುಮಾರ್​ ಸಂತ್ರಸ್ತೆಗೆ ಕರೆ ಮಾಡಿ ಬಾ ನಾನು ನಿನ್ನೊಂದಿಗೆ ಸೆಕ್ಸ್ ಮಾಡಬೇಕು ಎಂದು ಬಲವಂತವಾಗಿ ಪೀಡಿಸಿದ್ದಾನೆ. ಈ ವಿಚಾರವನ್ನು ಸಂತ್ರಸ್ತೆ ತಂದೆ, ತಾಯಿಗೆ ತಿಳಿಸಿದ್ದಾರೆ. ನಂತರ ಈ ಬಗ್ಗೆ ದೂರು ನೀಡುವುದು ಒಳ್ಳೆಯದೆಂದು ತೀರ್ಮಾನಿಸಿ ಸಂತ್ರಸ್ತೆ ನೆಲಮಂಗಲ ಟೌನ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಶಿವಕುಮಾರ್ ಹೊಸಳ್ಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ನೆಲಮಂಗಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ