ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನೆಲಮಂಗಲದಲ್ಲಿ ಯುವತಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ಆರೋಪದ ಮೇಲೆ ಬೀದರ್ ಮೂಲದ ಯುವಕನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪೊಲೀಸರು​ ಬಂಧಿಸಿದ್ದಾರೆ.

ಬೆಂಗಳೂರು: ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ಆರೋಪದ ಮೇಲೆ ಬೀದರ್ ಮೂಲದ ಯುವಕನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪೊಲೀಸರು​ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೀದರ್ ಮೂಲದ ಯುವಕ ಶಿವಕುಮಾರ್ ಹೊಸಳ್ಳಿ(25) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ವಾಸವಾಗಿರುವ ಶಿವಕುಮಾರ್, ಆರು ವರ್ಷದ ಹಿಂದೆ(2018) ಉಡುಪಿಯಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಯುವತಿಗೆ ಪರಿಚಯವಾಗಿದ್ದು, ಬಳಿಕ ಯುವತಿ ತಾಯಿ ಬಳಿ ಮೊಬೈಲ್ ನಂಬರ್ ತೆಗೆದುಕೊಂಡು ಮೆಸೇಜ್ ಮಾಡಲು ಆರಂಭಿಸಿದ್ದಾನೆ. 

2018ರ ಮಾರ್ಚ್​​ನಲ್ಲಿ ನೆಲಮಂಗಲದಲ್ಲಿರುವ ಯುವತಿ ಮನೆಗೆ ಶಿವಕುಮಾರ್​ ಹೋಗಿದ್ದು, ಈ ವೇಳೆ ಯುವತಿ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ಯುವತಿ ಮೇಲೆ ಅತ್ಯಾಚರವೆಸಗಿದ್ದಾನೆ. ಅಲ್ಲದೆ ಯುವತಿಗೆ ಗೊತ್ತಿಲ್ಲದಹಾಗೆ ಫೋನಿನಲ್ಲಿ ಫೋಟೋ ತೆಗೆದು, ವಿಡಿಯೋ ಮಾಡಿಕೊಂಡಿದ್ದಾನೆ. 

ಬಳಿಕ ಈ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ, ಹಲವಾರು ಬಾರಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಸಂತ್ರಸ್ತೆಯಿಂದ 85,000 ಹಣವನ್ನು ಶಿವಕುಮಾರ್​ ಪಡೆದುಕೊಂಡಿದ್ದಾನೆ. ಬಳಿಕ ಸಂತ್ರಸ್ತೆಯ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸಂತ್ರಸ್ತೆಯ ಚಿಕ್ಕಪ್ಪನ ಮಗಳ ಮೊಬೈಲ್​ಗೆ ಕಳಸಿದ್ದಾನೆ ಎಂದು ಆರೋಪಿಸಲಾಗಿದೆ.

ಕಳೆದ ಜನವರಿ 30 ರಂದು ಸಂತ್ರಸ್ತೆ ಮತ್ತು ಅವರ ತಂದೆ-ತಾಯಿ ಎಲ್ಲರೂ ನೆಲಮಂಗಲದ ಗಣೇಶನ ಗುಡಿ ದೇವಸ್ಥಾನಕ್ಕೆ ಹೋದಾಗ, ಶಿವಕುಮಾರ್​ ಸಂತ್ರಸ್ತೆಗೆ ಕರೆ ಮಾಡಿ ಬಾ ನಾನು ನಿನ್ನೊಂದಿಗೆ ಸೆಕ್ಸ್ ಮಾಡಬೇಕು ಎಂದು ಬಲವಂತವಾಗಿ ಪೀಡಿಸಿದ್ದಾನೆ. ಈ ವಿಚಾರವನ್ನು ಸಂತ್ರಸ್ತೆ ತಂದೆ, ತಾಯಿಗೆ ತಿಳಿಸಿದ್ದಾರೆ. ನಂತರ ಈ ಬಗ್ಗೆ ದೂರು ನೀಡುವುದು ಒಳ್ಳೆಯದೆಂದು ತೀರ್ಮಾನಿಸಿ ಸಂತ್ರಸ್ತೆ ನೆಲಮಂಗಲ ಟೌನ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಶಿವಕುಮಾರ್ ಹೊಸಳ್ಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ನೆಲಮಂಗಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT