ಸಂಗ್ರಹ ಚಿತ್ರ 
ರಾಜ್ಯ

ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಗೆ ಗುದ್ದಿ ಕೆಳಗೆ ಬೀಳಿಸಿದ ಕಳ್ಳರು, ಸರ ಕದ್ದು ಪರಾರಿ!

ನಾಲ್ಕು ವರ್ಷದ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರಿಗೆ ಗುದ್ದಿ ಕೆಳಗೆ ಬೀಳಿಸಿದ ಖದೀಮರು, ಆಕೆಯ ಸರ ಕದ್ದು ಪರಾರಿಯಾಗಿರುವ ಘಟನೆಯೊಂದು ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುವಿನ ತಾಡಿಸಘಟ್ಟ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು: ನಾಲ್ಕು ವರ್ಷದ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರಿಗೆ ಗುದ್ದಿ ಕೆಳಗೆ ಬೀಳಿಸಿದ ಖದೀಮರು, ಆಕೆಯ ಸರ ಕದ್ದು ಪರಾರಿಯಾಗಿರುವ ಘಟನೆಯೊಂದು ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುವಿನ ತಾಡಿಸಘಟ್ಟ ರಸ್ತೆಯಲ್ಲಿ ನಡೆದಿದೆ.

ನೆಲಮಂಗಲದ ಸೋಂಪುರ ನಿವಾಸಿ ಮೋನಿಶಾ (26) ಅವರು ಮಾರಸಂದ್ರದಲ್ಲಿರುವ ತನ್ನ ತಾಯಿಗೆ ಮನೆಗೆ ತೆರಳಿದ್ದರು. ಸಂಜೆ 5 ಸುಮಾರಿಗೆ ತಮ್ಮ ಮಗ ಸೇವಂತಗೌಡ (4) ನೊಂದಿಗೆ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ವೇಗವಾಗಿ ಎದುರಿನಿಂದ ಬಂದ ಆರೋಪಿಗಳು ಮೋನಿಶಾ ಅವರ ತಲೆಗೆ ಗುದ್ದಿದ್ದಾರೆ. ಇದರಿಂದ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಮೋನಿಶಾ ಅವರು ಕೆಳಗೆ ಬಿದ್ದಿದ್ದಾರೆ. ಮಗು ಕೂಡ ಕೆಳಗೆ ಬಿದ್ದಿದೆ.

ಕೂಡಲೇ ಆರೋಪಿಗಳು ಮೋನಿಶಾ ಅವರ ಬಳಿಗೆ ಬಂದಿದ್ದು, ಸರವನ್ನು ಕದ್ದು ಪರಾರಿಯಾಗಿದ್ದಾರೆ. ರಸ್ತೆಯಲ್ಲಿ ಯಾರೂ ಇರದ ಕಾರಣ ಕೂಗಿದರೂ ಯಾರೂ ಕೂಡ ರಕ್ಷಣೆಗೆ ಬರಲಿಲ್ಲ ಎಂದು ಮೋನಿಶಾ ಅವರು ಹೇಳಿದ್ದಾರೆ.

ಘಟನೆ ವೇಳೆ ಆರೋಪಿಗಳು ಗುದ್ದಿದ್ದ ಏಟು ನನ್ನ ಹೆಲ್ಮೆಟ್'ಗೆ ಬಿದ್ದಿತ್ತು. ವಾಹನದಿಂದ ಬಿದ್ದ ಪರಿಣಾಮ ನನಗೆ ಹಾಗೂ ಮಗನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ವೇಳೆ ಆಘಾತಕ್ಕೊಳಗಾದ ಹಿನ್ನೆಲೆಯಲ್ಲಿ ಆರೋಪಿಗಳ ವಾಹನ ಸಂಖ್ಯೆಯನ್ನೂ ನಾನು ನೋಟಲಿಲ್ಲ. ಮಗನೊಂದಿಗೆ ಮನೆಗೆ ಬಂದ ಬಳಿಕ ಪೊಲೀಸರಿಗೆ ದೂರು ನೀಡಿದೆ ಎಂದು ತಿಳಿಸಿದ್ದಾರೆ.

ಮಹಿಳೆ ದೂರು ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ಯಾಮಗೊಂಡ್ಲು ಪೊಲೀಸರು ದರೋಡೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರಸ್ತೆಯಲ್ಲಿ ಯಾವುದೇ ಸಿಸಿಟಿವಿಗಳಿಲ್ಲ. ಇದು ಖದೀಮರಿಗೆ ತಿಳಿದಿರಬೇಕು. ಇದೀಗ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ. ಇದರಿಂದ ಖದೀಮರ ಸುಳಿವುಗಳು ಸಿಕುವ ವಿಶ್ವಾಸವಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT