ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ 
ರಾಜ್ಯ

ಬೆಂಗಳೂರು: ಹಾಲಿನ ಸಬ್ಸಿಡಿ ಬಿಡುಗಡೆಗೆ ಒತ್ತಾಯಿಸಿ ಗೋವುಗಳೊಂದಿಗೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಹಾಲು ಉತ್ಪಾದಕರಿಗೆ ಬಾಕಿ ಇರುವ ಸಬ್ಸಿಡಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಹಾಲು ಉತ್ಪಾದಕರಿಗೆ ಬಾಕಿ ಇರುವ ಸಬ್ಸಿಡಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದರು.

ಇಂದು ತಮ್ಮ ಗೋವುಗಳೊಂದಿಗೆ ನಗರದ ಫ್ರೀಡಂ ಪಾರ್ಕ್ ಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಅನ್ನದಾತರಿಗೆ ಟೋಪಿ ಹಾಕಿರುವ ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೇವಲ ಜನತೆಗೆ ಮಾತ್ರವಲ್ಲ, ಜಾನುವಾರುಗಳಿಗೂ ಶಾಕ್‌ ನೀಡುತ್ತದೆ. ಹಾಲು ಉತ್ಪಾದಕರಿಗೆ ಸಬ್ಸಿಡಿ ಹೆಚ್ಚಳ, ಹಸು-ಎಮ್ಮೆ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಎಂಬಿತ್ಯಾದಿ ಕಲರ್‌ ಕಲರ್‌ ಹೂವುಗಳನ್ನು ಕಿವಿ ಮೇಲೆ ಇಟ್ಟು ಅಧಿಕಾರಕ್ಕೆ ಬಂದು, ಈಗ ಸಾಲವನ್ನು ನೀಡುತ್ತಿಲ್ಲ, ಸಬ್ಸಿಡಿಯನ್ನೂ ಹೆಚ್ಚಿಸುತ್ತಿಲ್ಲ ಎಂದು ಬಿಜೆಪಿ ನಾಯಕರು ಕಿಡಿಕಾರಿದರು. 

ಈಗ ರೈತರಿಗೆ ಹಾಲಿನ ಸಬ್ಸಿಡಿಯಾಗಿ 716 ಕೋಟಿ ರೂಪಾಯಿ ನೀಡಬೇಕಿದ್ದು. ಆ ಬಾಕಿ ಹಣವನ್ನೂ ನೀಡದೆ ಹಾಗೇ ಉಳಿಸಿಕೊಂಡಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಇದರ ಪರಿಣಾಮ ರಾಜ್ಯದಲ್ಲಿ ಹಾಲಿನ ಉತ್ಪಾದನೆಯು ಭಾರಿ ಪ್ರಮಾಣದಲ್ಲಿ ಕುಂಠಿತವಾಗಿದೆ. ಜನತೆಯ ಜತೆ ಜಾನುವಾರುಗಳ ಶಾಪವೂ ಸಹ ಸಿಎಂ ಸಿದ್ದರಾಮಯ್ಯ ಅವರಿಗೆ ತಟ್ಟುತ್ತದೆ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ವಿರುದ್ಧ 'ಅವಹೇಳನಕಾರಿ' ಹೇಳಿಕೆ: ವಿಧಾನ ಪರಿಷತ್‌ನಲ್ಲಿ ಕೋಲಾಹಲ, ಕಾಂಗ್ರೆಸ್ ಎಂಎಲ್‌ಸಿ ವಿರುದ್ಧ ಬಿಜೆಪಿ ಕಿಡಿ!

US ಜೊತೆಗೆ ವ್ಯಾಪಾರ ಒಪ್ಪಂದ: ಚೀನಾ, ಪಾಕಿಸ್ತಾನ, ಬಾಂಗ್ಲಾಗಿಂತಲೂ ಭಾರತಕ್ಕೆ ಹೆಚ್ಚಿನ ಲಾಭ! ರಷ್ಯಾದ ಮುಂದಿನ ನಡೆ ಏನು?

'ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ': ಸುಂಕ ಕಡಿತದ ನಂತರ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ

'Mogambo Khush Hai': ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ವಾಗ್ದಾಳಿ!

ಖಾಸಗಿ ಮಾಹಿತಿಯ ಕಳ್ಳತನ: 'ಗೌಪ್ಯತೆ' ಹಕ್ಕು ಉಲ್ಲಂಘನೆ, ವಾಟ್ಸಾಪ್, ಮೆಟಾಗೆ ಸುಪ್ರೀಂ ತರಾಟೆ!

SCROLL FOR NEXT