ಸಾಂದರ್ಭಿಕ ಚಿತ್ರ 
ರಾಜ್ಯ

ಗಾಯಗೊಂಡ ಹುಲಿಯನ್ನು ಕೇರಳ ಅರಣ್ಯಕ್ಕೆ ಓಡಿಸಲಾಗಿದೆಯೇ? ಎನ್‌ಟಿಸಿಎ ನಿಯಮ ಉಲ್ಲಂಘನೆ ಆರೋಪ!

ಕರ್ನಾಟಕದ ಅರಣ್ಯಾಧಿಕಾರಿಗಳ ವಿರುದ್ಧ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ(ಎನ್‌ಟಿಸಿಎ) ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಗಾಯಾಳು ಹುಲಿಗೆ ಯಾವುದೇ ವೈದ್ಯಕೀಯ ಚಿಕಿತ್ಸೆ ನೀಡದೆ ಕೇರಳ ಅರಣ್ಯ ವ್ಯಾಪ್ತಿಗೆ ಓಡಿಸಿದ ಆರೋಪ ಹೊರಿಸಲಾಗಿದೆ.

ಮೈಸೂರು: ಕರ್ನಾಟಕದ ಅರಣ್ಯಾಧಿಕಾರಿಗಳ ವಿರುದ್ಧ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ(ಎನ್‌ಟಿಸಿಎ) ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಗಾಯಾಳು ಹುಲಿಗೆ ಯಾವುದೇ ವೈದ್ಯಕೀಯ ಚಿಕಿತ್ಸೆ ನೀಡದೆ ಕೇರಳ ಅರಣ್ಯ ವ್ಯಾಪ್ತಿಗೆ ಓಡಿಸಿದ ಆರೋಪ ಹೊರಿಸಲಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ(ಬಿಟಿಆರ್‌) ವ್ಯಾಪ್ತಿಯ ಎಚ್‌ಡಿ ಕೋಟೆ ತಾಲೂಕಿನ ಗಂಡೆತ್ತೂರು ಗ್ರಾಮದಲ್ಲಿ ನಡೆದಿರುವ ಈ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ.

2023ರ ಮೇ 6ರಂದು ಗಂಡೆತ್ತೂರು ಗ್ರಾಮದ ಗೋಪಾಲಗೌಡ ಎಂಬುವವರ ಮೇಲೆ ಹುಲಿ ದಾಳಿ ನಡೆಸಿತ್ತು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಹುಲಿಯ ಮೇಲೆ ಕಲ್ಲು ತೂರಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ದಾಳಿಯ ನಂತರ ಬೋನು ಹಾಕಿ 2023ರ ಜುಲೈ 12ರಂದು ಗಂಡೆತ್ತೂರು ಗ್ರಾಮದ ಕಾಳೇಗೌಡ ಎಂಬುವವರ ಜಮೀನಿನಲ್ಲಿ ಹುಲಿ ಸೆರೆ ಸಿಕ್ಕಿತ್ತು. ಆದರೆ ಅರಣ್ಯ ಅಧಿಕಾರಿಗಳು ಗಾಯಗೊಂಡ ಹುಲಿಯನ್ನು ನಿರ್ಲಕ್ಷಿಸಿದ್ದಾರೆ ಎಂಬ ಮಾಹಿತಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಿಕ್ಕಿದೆ.

ಅರಣ್ಯ ಅಧಿಕಾರಿಗಳು ಅದಕ್ಕೆ ಯಾವುದೇ ಚಿಕಿತ್ಸೆ ನೀಡಿಲ್ಲ ಅಥವಾ ಎನ್‌ಟಿಸಿಎ ವಿವರಿಸಿರುವ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್(ಎಸ್‌ಒಪಿ) ಅನ್ನು ಅನುಸರಿಸಿಲ್ಲ. ವಯಸ್ಸಾದ ಹುಲಿಯ ಕುತ್ತಿಗೆ ಮತ್ತು ಕಾಲಿನ ಮೇಲೆ ಗಾಯಗಳಿದ್ದವು. ಹುಲಿಯನ್ನು ಪುನರ್ವಸತಿ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡುವ ಬದಲು, ಅರಣ್ಯ ಅಧಿಕಾರಿಗಳು ಎನ್‌ಟಿಸಿಎ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕೇರಳ ಅರಣ್ಯ ವ್ಯಾಪ್ತಿಗೆ ಓಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅರಣ್ಯಾಧಿಕಾರಿಗಳ ಈ ಕೃತ್ಯವನ್ನು ಸಾಮಾಜಿಕ ಕಾರ್ಯಕರ್ತ ಕಬಿನಿ ಶಿವಲಿಂಗ ಬಯಲಿಗೆಳೆದಿದ್ದಾರೆ. ರಾತ್ರಿ 11:30ಕ್ಕೆ ಗಂಡೆತ್ತೂರಿನಲ್ಲಿ ಹುಲಿ ಸಿಕ್ಕಿಬಿದ್ದಿದೆ ಎಂದು ಸೂಚಿಸುವ ಜಿಪಿಎಸ್ ನಿರ್ದೇಶಾಂಕಗಳಿರುವ ಫೋಟೋ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಲಭ್ಯವಾಗಿದೆ.

ಜಿಪಿಎಸ್ ನಿರ್ದೇಶಾಂಕಗಳ ಪ್ರಕಾರ, ಮರುದಿನ ಮುಂಜಾನೆ 2:30 ರ ಹೊತ್ತಿಗೆ, ಗಾಯಗೊಂಡ ಹುಲಿಯನ್ನು ರಾಜ್ಯದ ಗಡಿಯ ಹತ್ತಿರ ಬಿಡಲಾಯಿತು ಮತ್ತು  ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಕೇರಳ ಶ್ರೇಣಿಗೆ ಓಡಿಸಲಾಯಿತು ಎನ್ನಲಾಗಿದೆ.

TNIE ಪಡೆದ ಆಡಿಯೋ ಕ್ಲಿಪ್‌ನಲ್ಲಿ, ರೇಂಜ್ ಫಾರೆಸ್ಟ್ ಆಫೀಸರ್ ಅಮೃತೇಶ್ ಗಾಯಗೊಂಡ ಹುಲಿಯನ್ನು ಸೆರೆಹಿಡಿಯಲು ಒಪ್ಪಿಕೊಂಡಿದ್ದಾರೆ. ಆದಾಗ್ಯೂ, ಹುಲಿಯನ್ನು ಕೇರಳದ ಅರಣ್ಯ ಪ್ರದೇಶಕ್ಕೆ ಓಡಿಸಲು ತನ್ನ ಉನ್ನತ ಅಧಿಕಾರಿಗಳಿಂದ ಸೂಚನೆ ಬಂದಿದೆ ಎಂದು ಅವರು ಹೇಳಿದ್ದಾರೆ. ಈ ವೇಳೆ ಅಮೃತೇಶ್ ಅವರಿಗೆ ಹಿರಿಯ ಅಧಿಕಾರಿಗಳು ರಕ್ಷಣೆ ನೀಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT