ಹೈಕೋರ್ಟ್ 
ರಾಜ್ಯ

ಕಿರುಕುಳ ಆರೋಪ: ಇಡಿ ಅಧಿಕಾರಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ 

ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ನಿರ್ದೇಶಕ ವೈ ಬಿ ಅಶ್ವತ್ಥ ನಾರಾಯಣ ಅವರು ದಾಖಲಿಸಿರುವ ಪ್ರಕರಣದ ಆಧಾರದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಉಪ ನಿರ್ದೇಶಕ ಮನೋಜ್ ಮಿತ್ತಲ್ ಮತ್ತು ಸಹಾಯಕ ನಿರ್ದೇಶಕ ಅಜಯ್ ಕುಮಾರ್ ವೈದ್ಯ ವಿರುದ್ಧದ ಮುಂದಿನ ತನಿಖೆಗೆ  ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಬೆಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ನಿರ್ದೇಶಕ ವೈ ಬಿ ಅಶ್ವತ್ಥ ನಾರಾಯಣ ಅವರು ದಾಖಲಿಸಿರುವ ಪ್ರಕರಣದ ಆಧಾರದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಉಪ ನಿರ್ದೇಶಕ ಮನೋಜ್ ಮಿತ್ತಲ್ ಮತ್ತು ಸಹಾಯಕ ನಿರ್ದೇಶಕ ಅಜಯ್ ಕುಮಾರ್ ವೈದ್ಯ ವಿರುದ್ಧದ ಮುಂದಿನ ತನಿಖೆಗೆ  ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ವಿಚಾರಣೆ ಸಂದರ್ಭದಲ್ಲಿ ಇವರಿಬ್ಬರೂ ತನಗೆ ಚಿತ್ರಹಿಂಸೆ ನೀಡುವುದರೊಂದಿಗೆ ಹಲ್ಲೆ ಮಾಡಿದ್ದಾರೆ ಎಂದು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಅಶ್ವತ್ಥ ನಾರಾಯಣ ದೂರು ದಾಖಲಿಸಿದ್ದರು.

ದೂರುದಾರರು ದಾಖಲಿಸಿರುವ ಎಫ್ ಐಆರ್ ಪ್ರಶ್ನಿಸಿ ಇಡಿ ಅಧಿಕಾರಿಗಳಾದ ಮಿತ್ತಲ್ ಮತ್ತು ವೈದ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೆ ನಟರಾಜನ್, ಇದು ಇಡಿ ಕಾರ್ಯಾಚರಣೆಗೆ ಅಡ್ಡಿಪಡಿಸುವ ಪ್ರಯತ್ನವಾಗಿದೆ ಎಂಬ ಕಾರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದರು. 

ಅರ್ಜಿದಾರರು ಮಾರಣಾಂತಿಕ ಅಸ್ತ್ರವಲ್ಲದ PVC ಪೈಪ್‌ಗಳನ್ನು ಹಲ್ಲೆ ಮಾಡಲು ಬಳಸಿದ್ದಾರೆಂದು ಹೇಳಲಾಗುತ್ತದೆ. ಅದು ಸೆಕ್ಷನ್ 324 ರ ಅಡಿಯಲ್ಲಿ ಬರುತ್ತದೆ. ಉಳಿದ ಅಪರಾಧಗಳು ಅರಿಯಲಾಗದ ಅಪರಾಧಗಳಾಗಿದ್ದು, ಎಫ್‌ಐಆರ್ ದಾಖಲಿಸಲು ಬರುವುದಿಲ್ಲ ಎಂದು ಸಾಲಿಸಿಟರ್ ಜನರಲ್ ವಾದಿಸಿದರು. ಇದನ್ನು ಪರಿಗಣಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯ ತನಕ ಅರ್ಜಿದಾರರ ವಿರುದ್ಧದ ಮುಂದಿನ ತನಿಖೆಗೆ ತಡೆ ನೀಡಿ, ಅಶ್ವತ್ಥ ನಾರಾಯಣ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT