ಬೇಸಿಗೆ ಕರ್ನಾಟಕ 
ರಾಜ್ಯ

ಇದು ಬಿರು ಬೇಸಿಗೆಯ ಟ್ರೈಲರ್: ಫೆಬ್ರವರಿ ಆರಂಭದಲ್ಲೇ ಬೆಂಗಳೂರಿನಲ್ಲಿ ತಾಪಮಾನ 32 ಡಿಗ್ರಿ!

ಮುಂಬರುವ ಬಿರು ಬೇಸಿಗೆಯ ಪರಿಚಯ ಫೆಬ್ರವರಿಯಲ್ಲೇ ಆಗುತ್ತಿದ್ದು, ರಾಜಧಾನಿ ಉದ್ಯಾನನಗರಿ ಬೆಂಗಳೂರಿನಲ್ಲಿ ತಾಪಮಾನ ಮಂಗಳವಾರ 32 ಡಿಗ್ರಿಗೆ ಏರಿಕೆಯಾಗಿದೆ.

ಬೆಂಗಳೂರು: ಮುಂಬರುವ ಬಿರು ಬೇಸಿಗೆಯ ಪರಿಚಯ ಫೆಬ್ರವರಿಯಲ್ಲೇ ಆಗುತ್ತಿದ್ದು, ರಾಜಧಾನಿ ಉದ್ಯಾನನಗರಿ ಬೆಂಗಳೂರಿನಲ್ಲಿ ತಾಪಮಾನ ಮಂಗಳವಾರ 32 ಡಿಗ್ರಿಗೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಬಿಸಿಗೆ ಆರಂಭಕ್ಕೆ ದಿನಗಣನೆ ಶುರುವಾಗಿರುವಂತೆಯೇ ಇತ್ತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಲೇ ತಾಪಮಾನ ಬೇಸಿಗೆಯ ಪರಿಚಯ ನೀಡುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ತಾಪಮಾಣ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ತಾಪಮಾನ 32 ಡಿಗ್ರಿಗೆ ಏರಿಕೆಯಾಗಿದೆ. ಗಾಳಿ ವೇಗ ಪ್ರತೀ ಗಂಟೆಗೆ 22 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು, ವಾಯು ಗುಣಮಟ್ಟ ಕೂಡ ಕಳಪೆ ಮಟ್ಟದಲ್ಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಅ್ಯಕ್ಯುವೆದರ್ ವರದಿ ಮಾಡಿದೆ.

ಉದ್ಯಾನನಗರಿ ಬೆಂಗಳೂರಿನಲ್ಲಿ ಫೆಬ್ರವರಿಯಲ್ಲೇ ತಾಪಮಾನ ಮಾರ್ಚ್ ಏಪ್ರಿಲ್ ತಿಂಗಳಿನಲ್ಲಿರುವಂತೆ ಗರಿಷ್ಠ ಮಟ್ಟಕ್ಕೆ ತಲುಪಿದ್ದು, ಜನರನ್ನು ಹೈರಾಣಾಗಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿ ವಾತಾವರಣ ಮುಂದುವರೆದಿದ್ದು, ಹಾಲಿ ಪರಿಸ್ಥಿತಿಗೆ ಎಲ್ ನಿನೊ ಕಾರಣ ಎಂದು ಹೇಳಲಾಗಿದೆ. ಎಲ್ ನಿನೋ ಪರಿಣಾಮದಿಂದಾಗಿ ರಾಜ್ಯದ ಮಳೆ ಮೇಲೆ ಗಂಭೀರ ಪರಿಣಾಮ ಬೀರಿತ್ತು. ಅಲ್ಲದೆ ಇದೇ ಎಲ್ ನಿನೋ ಪರಿಣಾಣ ಇದೀಗ ರಾಜ್ಯದಲ್ಲಿ ಅವಧಿಗೂ ಮುನ್ನವೇ ಬೇಸಿಗೆ ಕಾಲಿಡುವಂತೆ ಮಾಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬೇಸಿಗೆ ವಿಸ್ತರಣೆ
ಫೆಬ್ರವರಿ ಆರಂಭದಿಂದಲೇ ನಗರದಲ್ಲಿ ಸರಾಸರಿ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದು, ವಿಶೇಷವಾಗಿ ಮಧ್ಯಾಹ್ನದ ಸಮಯದಲ್ಲಿ ಸೆಖೆಯ ಹೆಚ್ಚಳ ಉಂಟಾಗುತ್ತಿದೆ. ಪೂರ್ವ ಪೆಸಿಫಿಕ್ ಸಾಗರದಲ್ಲಿ ಮೇಲ್ಮೈ ನೀರಿನ ತಾಪಮಾನ ಏರಿಕೆಗೆ ಕಾರಣವಾಗುವ ಹವಾಮಾನ ಪರಿಸ್ಥಿತಿಯಾದ ಎಲ್ನಿನೋ ಪರಿಣಾಮವು ಪ್ರಬಲವಾಗಿದೆ. ಪ್ರತಿ ವರ್ಷ ಜಾಗತಿಕ ತಾಪಮಾನ ಏರಿಕೆಯಿಂದಾಗಿ ಸೆಖೆ ಹೆಚ್ಚಾಗುತ್ತಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ವಿಜ್ಞಾನಿಯೊಬ್ಬರು ಹೇಳಿದ್ದಾರೆ.

ತಾಂತ್ರಿಕವಾಗಿ ಫೆಬ್ರವರಿ ಚಳಿಗಾಲದ ತಿಂಗಳಾಗಿದ್ದರೂ, ಎಲ್ ನಿನೋ ಪರಿಣಾಮವು ತಾಪಮಾನವನ್ನು ಹೆಚ್ಚಿಸುತ್ತಿದೆ. ಮಾರ್ಚ್ ನಂತರ ಬಿಸಿಲು ಕಡಿಮೆಯಾಗಬಹುದು. ಆದರೆ ಪ್ರಸ್ತುತ ಪರಿಸ್ಥಿತಿಗಳು ಬೇಸಿಗೆಯ ವಿಸ್ತರಣೆಯನ್ನು ಸೂಚಿಸುತ್ತಿದ್ದು, ಬೇಸಿಗೆಯು ಕಳೆದ ವರ್ಷಕ್ಕಿಂತ ಕಠಿಣವಾಗಿರಬಹುದು. ಮಾರ್ಚ್ ಆರಂಭದಲ್ಲಿ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿ ಉಂಟಾಗಬಹುದು. ಆದರೆ ಮುಂದಿನ ಏಳು ದಿನಗಳ ಮುನ್ಸೂಚನೆಯಲ್ಲಿ ಬಿಸಿಗಾಳಿ ಕಾಣಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT