ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 
ರಾಜ್ಯ

ಬೆಂಗಳೂರು: ಕೆಐಎಯಲ್ಲಿ ಐದು ಗಂಟೆಗಳಲ್ಲಿ 9 ಕೆಜಿಗೂ ಹೆಚ್ಚು ಕಳ್ಳಸಾಗಣೆ ಚಿನ್ನ ವಶ

ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ದಾಖಲೆಯ 5 ಗಂಟೆಗಳಲ್ಲಿ ಮೂರು ವಿಭಿನ್ನ ಪ್ರಕರಣಗಳಲ್ಲಿ 9 ಕೆಜಿಗೂ ಹೆಚ್ಚು ಕಳ್ಳಸಾಗಣೆಯಾದ ಚಿನ್ನವನ್ನು ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ದಾಖಲೆಯ 5 ಗಂಟೆಗಳಲ್ಲಿ ಮೂರು ವಿಭಿನ್ನ ಪ್ರಕರಣಗಳಲ್ಲಿ 9 ಕೆಜಿಗೂ ಹೆಚ್ಚು ಕಳ್ಳಸಾಗಣೆಯಾದ ಚಿನ್ನವನ್ನು ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 

ಈ ಸಂಬಂಧ ಮಹಿಳೆ ಸೇರಿದಂತೆ ಆರು ಮಂದಿ ಭಾರತೀಯರನ್ನು ಬಂಧಿಸಲಾಗಿದೆ. ಫೆಬ್ರವರಿ 1 ರಂದು ಶಾರ್ಜಾದಿಂದ ಹೊರಟಿದ್ದ ವಿಮಾನವನ್ನು ಶೋಧಿಸಿದಾಗ 3.75 ಕೆಜಿ ವಿದೇಶಿ ಮೂಲದ ಚಿನ್ನದ ಗಟ್ಟಿಯನ್ನು ಡಿಆರ್ ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆಸನಗಳ ಮೇಲಿನ ಲಗೇಜ್ ಕ್ಯಾಬಿನ್‌ನಲ್ಲಿ ಬ್ಯಾಗ್‌ನಲ್ಲಿ ಚಿನ್ನದ ಗಟ್ಟಿಯನ್ನು ಸಾಗಿಸಲಾಗುತಿತ್ತು ಎಂದು ಮೂಲಗಳು ತಿಳಿಸಿವೆ. 

ಎರಡನೇ ಪ್ರಕರಣದಲ್ಲಿ, ಮಲೇಷ್ಯಾ ಏರ್‌ಲೈನ್ಸ್ ವಿಮಾನದಲ್ಲಿ ಕೌಲಾಲಂಪುರದಿಂದ ಬಂದ ಇಬ್ಬರು ಪ್ರಯಾಣಿಕರನ್ನು ತಡೆದ  ಡಿಆರ್‌ಐ ಅಧಿಕಾರಿಗಳು ಅವರಿಂದ1.55 ಕೋಟಿ ಮೌಲ್ಯದ 2,854 ಗ್ರಾಂ ತೂಕದ ಪೇಸ್ಟ್ ರೂಪದ ಚಿನ್ನವನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಗಳನ್ನು ಶೂ ಸಾಕ್ಸ್ ನಲ್ಲಿ ಚಿನ್ನ ಸಾಗಿಸುತ್ತಿದದ್ದು ಕಂಡುಬಂದಿದ್ದು, ಅವರಿಬ್ಬರನ್ನೂ ಬಂಧಿಸಲಾಗಿದೆ. 

ಮೂರನೇ ಪ್ರಕರಣದಲ್ಲಿ, ಅದೇ ಮಲೇಷ್ಯಾ ಏರ್‌ಲೈನ್ಸ್ ವಿಮಾನದಲ್ಲಿ ಕೌಲಾಲಂಪುರದಿಂದ ಬಂದಿಳಿದ ನಾಲ್ವರು ಪ್ರಯಾಣಿಕರನ್ನು ಡಿಆರ್‌ಐ ಅಧಿಕಾರಿಗಳು ತಡೆದಿದ್ದು, ಒಳ ಉಡುಪಿನಲ್ಲಿ ಸಾಗಿಸಲಾಗುತ್ತಿದ್ದ 1.42 ಕೋಟಿ ಮೌಲ್ಯದ 2,632 ಗ್ರಾಂ ತೂಕದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಚಿನ್ನಾಭರಣಗಳಲ್ಲದೆ, 73.7 ಲಕ್ಷ ರೂಪಾಯಿ ಮೌಲ್ಯದ 3,510 ಇ-ಸಿಗರೇಟ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT