ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 
ರಾಜ್ಯ

ಬೆಂಗಳೂರು: ಕೆಐಎಯಲ್ಲಿ ಐದು ಗಂಟೆಗಳಲ್ಲಿ 9 ಕೆಜಿಗೂ ಹೆಚ್ಚು ಕಳ್ಳಸಾಗಣೆ ಚಿನ್ನ ವಶ

ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ದಾಖಲೆಯ 5 ಗಂಟೆಗಳಲ್ಲಿ ಮೂರು ವಿಭಿನ್ನ ಪ್ರಕರಣಗಳಲ್ಲಿ 9 ಕೆಜಿಗೂ ಹೆಚ್ಚು ಕಳ್ಳಸಾಗಣೆಯಾದ ಚಿನ್ನವನ್ನು ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ದಾಖಲೆಯ 5 ಗಂಟೆಗಳಲ್ಲಿ ಮೂರು ವಿಭಿನ್ನ ಪ್ರಕರಣಗಳಲ್ಲಿ 9 ಕೆಜಿಗೂ ಹೆಚ್ಚು ಕಳ್ಳಸಾಗಣೆಯಾದ ಚಿನ್ನವನ್ನು ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 

ಈ ಸಂಬಂಧ ಮಹಿಳೆ ಸೇರಿದಂತೆ ಆರು ಮಂದಿ ಭಾರತೀಯರನ್ನು ಬಂಧಿಸಲಾಗಿದೆ. ಫೆಬ್ರವರಿ 1 ರಂದು ಶಾರ್ಜಾದಿಂದ ಹೊರಟಿದ್ದ ವಿಮಾನವನ್ನು ಶೋಧಿಸಿದಾಗ 3.75 ಕೆಜಿ ವಿದೇಶಿ ಮೂಲದ ಚಿನ್ನದ ಗಟ್ಟಿಯನ್ನು ಡಿಆರ್ ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆಸನಗಳ ಮೇಲಿನ ಲಗೇಜ್ ಕ್ಯಾಬಿನ್‌ನಲ್ಲಿ ಬ್ಯಾಗ್‌ನಲ್ಲಿ ಚಿನ್ನದ ಗಟ್ಟಿಯನ್ನು ಸಾಗಿಸಲಾಗುತಿತ್ತು ಎಂದು ಮೂಲಗಳು ತಿಳಿಸಿವೆ. 

ಎರಡನೇ ಪ್ರಕರಣದಲ್ಲಿ, ಮಲೇಷ್ಯಾ ಏರ್‌ಲೈನ್ಸ್ ವಿಮಾನದಲ್ಲಿ ಕೌಲಾಲಂಪುರದಿಂದ ಬಂದ ಇಬ್ಬರು ಪ್ರಯಾಣಿಕರನ್ನು ತಡೆದ  ಡಿಆರ್‌ಐ ಅಧಿಕಾರಿಗಳು ಅವರಿಂದ1.55 ಕೋಟಿ ಮೌಲ್ಯದ 2,854 ಗ್ರಾಂ ತೂಕದ ಪೇಸ್ಟ್ ರೂಪದ ಚಿನ್ನವನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಗಳನ್ನು ಶೂ ಸಾಕ್ಸ್ ನಲ್ಲಿ ಚಿನ್ನ ಸಾಗಿಸುತ್ತಿದದ್ದು ಕಂಡುಬಂದಿದ್ದು, ಅವರಿಬ್ಬರನ್ನೂ ಬಂಧಿಸಲಾಗಿದೆ. 

ಮೂರನೇ ಪ್ರಕರಣದಲ್ಲಿ, ಅದೇ ಮಲೇಷ್ಯಾ ಏರ್‌ಲೈನ್ಸ್ ವಿಮಾನದಲ್ಲಿ ಕೌಲಾಲಂಪುರದಿಂದ ಬಂದಿಳಿದ ನಾಲ್ವರು ಪ್ರಯಾಣಿಕರನ್ನು ಡಿಆರ್‌ಐ ಅಧಿಕಾರಿಗಳು ತಡೆದಿದ್ದು, ಒಳ ಉಡುಪಿನಲ್ಲಿ ಸಾಗಿಸಲಾಗುತ್ತಿದ್ದ 1.42 ಕೋಟಿ ಮೌಲ್ಯದ 2,632 ಗ್ರಾಂ ತೂಕದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಚಿನ್ನಾಭರಣಗಳಲ್ಲದೆ, 73.7 ಲಕ್ಷ ರೂಪಾಯಿ ಮೌಲ್ಯದ 3,510 ಇ-ಸಿಗರೇಟ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT