ಬೆಂಗಳೂರು ಮೆಟ್ರೋಗಾಗಿ ಮೊದಲ ಚಾಲಕ ರಹಿತ ರೈಲು ಮಂಗಳವಾರ ಚೆನ್ನೈ ಬಂದರಿಗೆ ಹಡಗಿನ ಮೂಲಕ ತಲುಪಿದೆ. 
ರಾಜ್ಯ

ಬೆಂಗಳೂರಿನ ಮೊದಲ ಚಾಲಕ ರಹಿತ ರೈಲು ಚೀನಾದಿಂದ ಚೆನ್ನೈಗೆ ಆಗಮನ; ನಾಳೆ ಬೆಂಗಳೂರಿಗೆ ರವಾನೆ ಸಾಧ್ಯತೆ

ಬೆಂಗಳೂರಿನ ನಮ್ಮ ಮೆಟ್ರೋಗೆ ಮೊದಲ ಚಾಲಕ ರಹಿತ ರೈಲು ಶಾಂಘೈನಿಂದ ಚೆನ್ನೈ ಬಂದರಿಗೆ ಬಂದು ತಲುಪಿದೆ. ಕಸ್ಟಮ್ಸ್ ಕ್ಲಿಯರೆನ್ಸ್ ನಂತರ, ರೈಲನ್ನು ರಸ್ತೆ ಮೂಲಕ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ತರಲಾಗುತ್ತದೆ, ಆರು ಬೋಗಿಗಳನ್ನು ಟ್ರೇಲರ್‌ಗಳ ಮೂಲಕ ಸಾಗಿಸಲಾಗುತ್ತದೆ.

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋಗೆ ಮೊದಲ ಚಾಲಕ ರಹಿತ ರೈಲು ಶಾಂಘೈನಿಂದ ಚೆನ್ನೈ ಬಂದರಿಗೆ ಬಂದು ತಲುಪಿದೆ. 

ಕಸ್ಟಮ್ಸ್ ಕ್ಲಿಯರೆನ್ಸ್ ನಂತರ, ರೈಲನ್ನು ರಸ್ತೆ ಮೂಲಕ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ತರಲಾಗುತ್ತದೆ, ಆರು ಬೋಗಿಗಳನ್ನು ಟ್ರೇಲರ್‌ಗಳ ಮೂಲಕ ಸಾಗಿಸಲಾಗುತ್ತದೆ.

ಚೀನಾ-ಮಾಲೀಕತ್ವದ ಸಿಆರ್‌ಆರ್‌ಸಿ ನಾನ್‌ಜಿಂಗ್ ಪುಜೆನ್ ಕಂ. ಲಿಮಿಟೆಡ್‌ನಿಂದ ತಯಾರಿಸಲ್ಪಟ್ಟ ಈ ರೈಲು, ಆರ್‌ವಿ ರಸ್ತೆ-ಬೊಮ್ಮಸಂದ್ರ ಲೈನ್‌ಗೆ ಪ್ರಾಯೋಗಿಕ ಸಂಚಾರ ನಡೆಸುತ್ತದೆ, ಚೆನ್ನೈ ಬಂದರಿನ ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. 

ಜನವರಿ 24 ರಂದು ಶಾಂಘೈ ಬಂದರಿನಿಂದ ಕಳುಹಿಸಲಾದ ಸಾಗಣೆಯು ನಿನ್ನೆ ಬೆಳಗ್ಗೆ 11 ಗಂಟೆಗೆ  ಜವಾಹರ್ ಡೆಕ್ -2ನ್ನು ತಲುಪಿತು. ಇದು ಎಂವಿ ಸ್ಪ್ರಿಂಗ್ ಮೋಟಾ ಹಡಗಿನಲ್ಲಿ ಬಂದಿತು. ಪ್ರತಿ ಕೋಚ್ 38.7 ಮೆಟ್ರಿಕ್ ಟನ್ ತೂಗುತ್ತದೆ. ನೌಕೆಯು ಜನವರಿ 24 ರಂದು ತನ್ನ ಪ್ರಯಾಣವನ್ನು ಪ್ರಾರಂಭಿಸಿ ಚೆನ್ನೈ ತಲುಪಲು ಎರಡು ವಾರಗಳನ್ನು ತೆಗೆದುಕೊಂಡಿತು ಎಂದು ಅವರು ಹೇಳಿದರು.

ಚೆನ್ನೈ ಬಂದರಿಗೆ ಬಂದಿರುವ ಬೋಗಿಗಳು

ಇದನ್ನು ಯುನಿಟ್ರಾನ್ಸ್ ಶಿಪ್ಪಿಂಗ್ ಮತ್ತು ಟ್ರೇಡಿಂಗ್ ಪ್ರೈವೇಟ್ ಲಿಮಿಟೆಡ್ ರವಾನೆ ಮಾಡಿದೆ. ಕಂಪನಿಯ ಪ್ರತಿನಿಧಿಯೊಬ್ಬರು, ನಾವು ಇಂದು ರಾತ್ರಿ ಮತ್ತು ನಾಳೆ ಕೋಚ್‌ಗಳನ್ನು ಬಿಡುಗಡೆ ಮಾಡುತ್ತೇವೆ. ಇಂದು ಬುಧವಾರ ಮಧ್ಯಾಹ್ನ 12 ಗಂಟೆಯೊಳಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಕಸ್ಟಮ್ಸ್ ಕ್ಲಿಯರೆನ್ಸ್ ಒಂದು ದಿನ ತೆಗೆದುಕೊಳ್ಳುತ್ತದೆ. ನಾಳೆ ವೇಳೆಗೆ ಟ್ರೇಲರ್‌ಗಳ ಮೂಲಕ ಸಾಗಣೆಯು ಬೆಂಗಳೂರಿಗೆ ಹೊರಡಲಿದೆ ಎಂದರು. 

ಫೆಬ್ರವರಿ 20 ರೊಳಗೆ ಕೋಚ್‌ಗಳು ಬೆಂಗಳೂರಿನ ಡಿಪೋಗೆ ತಲುಪುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ ಮಹೇಶ್ವರ್ ರಾವ್ ಮಾತನಾಡಿ, ಸಿಆರ್‌ಆರ್‌ಸಿಯಿಂದ ಐವರು ಎಂಜಿನಿಯರ್‌ಗಳು ರೈಲು ಪರೀಕ್ಷೆ ನಡೆಸಲು ಬೆಂಗಳೂರಿಗೆ ಆಗಮಿಸಲಿದ್ದಾರೆ. ಉಳಿದವರು ತಿಟಾಘರ್‌ಗೆ ಹೋಗುತ್ತಾರೆ.

ಇನ್ನೆರಡು ಚಾಲಕ ರಹಿತ ರೈಲುಗಳು ಅಲ್ಲಿ ಜೋಡಣೆಯಾಗುತ್ತಿವೆ. ಹಳದಿ ಮಾರ್ಗವು ಸಂಪೂರ್ಣವಾಗಿ ಸಿದ್ಧವಾಗಿದೆ. ಆದರೆ ಕಾರ್ಯಾಚರಣೆಗಳನ್ನು  ಈ ನಿರ್ದಿಷ್ಟ ರೈಲುಗಳ ಅಗತ್ಯವಿದೆ. ಮಾರ್ಚ್ ಆರಂಭದಲ್ಲಿ ಪ್ರಾಯೋಗಿಕ ಓಡಾಟ ಆರಂಭವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?