ಬಿಜೆಪಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ 
ರಾಜ್ಯ

ಜಂತರ್‌ ಮಂತರ್‌ನಲ್ಲಿ ನಾಟಕ ಮಾಡಲು ಮೇಕಪ್‌ ಹಾಕಿ ಕೂತಿದ್ದಾರೆ ಕಾಂಗ್ರೆಸ್ಸಿಗರು: ಬಿಜೆಪಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು 'ನನ್ನ ತೆರಿಗೆ ನನ್ನ ಹಕ್ಕು' ಘೋಷವಾಕ್ಯದಡಿ ದೆಹಲಿ ಚಲೋ ನಡೆಸಲಿದ್ದರೆ ಇತ್ತ ಬೆಂಗಳೂರಿನಲ್ಲಿ ಇದಕ್ಕೆ ಪ್ರತಿಯಾಗಿ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ವಿಧಾನಸೌಧದ ಮುಂದೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ.

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು 'ನನ್ನ ತೆರಿಗೆ ನನ್ನ ಹಕ್ಕು' ಘೋಷವಾಕ್ಯದಡಿ ದೆಹಲಿ ಚಲೋ ನಡೆಸಲಿದ್ದರೆ ಇತ್ತ ಬೆಂಗಳೂರಿನಲ್ಲಿ ಇದಕ್ಕೆ ಪ್ರತಿಯಾಗಿ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ವಿಧಾನಸೌಧದ ಮುಂದೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆಗೂ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. 

ಕರ್ನಾಟಕದ ಜನತೆ ಕಾಂಗ್ರೆಸ್​ಗೆ ಮತ ನೀಡಿದ್ದು ಗ್ಯಾರಂಟಿಗಳನ್ನು ನಂಬಿ! ಆದರೆ, ಮಜಾವಾದಿ ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಬಿಟ್ಟಿ ಜಾಹೀರಾತು ಕೊಟ್ಟು ಪ್ರಚಾರ ಪಡೆದುಕೊಂಡು ದೆಹಲಿಯಲ್ಲಿ ಶೋಕಿ ಮಾಡಲು ಹೋಗಿದೆ. ಕನ್ನಡಿಗರ ಪ್ರಶ್ನೆಗಳಿಗೆ ಉತ್ತರ ಕೊಡಲು ಯೋಗ್ಯತೆ ಇಲ್ಲದ ಕಾಂಗ್ರೆಸ್ಸಿಗರು, ತಾವೇ ಮಾಡಿದ ಸುಳ್ಳುಗಳಿಗೆ ಸತ್ಯ ಹುಡುಕುತ್ತಿದ್ದಾರೆ. ಜಂತರ್‌ ಮಂತರ್‌ನಲ್ಲಿ ಬೃಹನ್ನಳೆ ನಾಟಕ ಮಾಡಲು ಮೇಕಪ್‌ ಹಾಕಿ ಕೂತಿದ್ದಾರೆ ಎಡಬಿಡಂಗಿ ಕಾಂಗ್ರೆಸ್ಸಿಗರು” ಎಂದು ರಾಜ್ಯ ಬಿಜೆಪಿ ಘಟಕ ಟೀಕೆ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT