ಐಟಿ ಅಧಿಕಾರಿಗಳು ಕೊಪ್ಪಳದಲ್ಲಿ ವಿ ಆರ್ ಪಾಟೀಲ್ ಮನೆ ಮೇಲೆ ದಾಳಿ 
ರಾಜ್ಯ

ಡಿಕೆ ಶಿವಕುಮಾರ್ ಆಪ್ತನ ಮನೆ ಸೇರಿದಂತೆ ರಾಜ್ಯದ ಹಲವೆಡೆ ಐಟಿ ದಾಳಿ, ದಾಖಲೆಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಉದ್ಯಮಿಗಳ ನಿವಾಸ, ಕಚೇರಿಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಉದ್ಯಮಿಗಳ ನಿವಾಸ, ಕಚೇರಿಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ವಿ ಆರ್ ಪಾಟೀಲ್ ಗೌಡ ಅವರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗೋವಾ ಮತ್ತು ಹುಬ್ಬಳ್ಳಿಯಿಂದ ಬಂದಿರುವ 20ಕ್ಕೂ ಹೆಚ್ಚು ಅಧಿಕಾರಿಗಳು ಕೊಪ್ಪಳ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿರುವ ಡಿಕೆ ಶಿವಕುಮಾರ್​ ಅವರ ಆಪ್ತ ವಿಆರ್ ಪಾಟೀಲ್ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. 

ಉದ್ಯಮಿಯಾಗಿರುವ ವಿ.ಆರ್ ಪಾಟೀಲ್ ಒಡೆತನದ ಖಾಸಗಿ ಶಾಲೆಗೆ ಕಳೆದ ಜನವರಿ 27 ರಂದು ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದರು. ಡಿಸಿಎಂ ಡಿಕೆ ಶಿವಕುಮಾರ್​ ಬಂದು ಹೋದ ಕೆಲವೇ ದಿನಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. 

ಬಳ್ಳಾರಿ ಜಿಲ್ಲೆಯ ಪ್ರಮುಖ ಗುತ್ತಿಗೆದಾರ ಪಿಚ್ಚೇಶ್ವರ ರಾವ್ ಅವರ ಮನೆ ಮತ್ತು ಪಾರ್ವತಿ ನಗರದಲ್ಲಿನ ಅವರ ಶ್ರೀನಿವಾಸ್ ಕನ್ಸಸ್ಟ್ರಕ್ಷನ್ಸ್ ಕಚೇರಿ ಮೇಲೆ ಇಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ರಸ್ತೆ, ಕಾಲುವೆ ಸೇರಿದಂತೆ ವಿವಿಧ ಬೃಹತ್ ಕಾಮಗಾರಿಗಳ ಕಾಂಟ್ರಾಕ್ಟ್ ಮಾಡಿರುವ ಪಿಚ್ಚೇಶ್ವರ ರಾವ್, ಆದಾಯ ತೆರಿಗೆ ವಂಚನೆ ಹಾಗೂ ಆದಾಯಕ್ಕೂ ಮೀರಿದ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬಂದಿರುವ ಐಟಿ ಅಧಿಕಾರಿಗಳ ನಾಲ್ಕು ಜನರ ತಂಡದಿಂದ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 

ತೆರಿಗೆ ವಂಚನೆ ಆರೋಪದಡಿ ಆಂಧ್ರಪ್ರದೇಶ ಮೂಲದ ಉದ್ಯಮಿ ವಂಶಿ ಎಂಬುವರಿಗೆ ಸಂಬಂಧಿಸಿದ ಬೆಂಗಳೂರಿನ ಜಯನಗರ 8ನೇ ಹಂತದಲ್ಲಿರುವ ಮನೆ, ಜೆ.ಸಿ. ರಸ್ತೆಯ ಜೈನ್ ಹೈಟ್ಸ್​ ಕಟ್ಟಡದಲ್ಲಿರುವ ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ. ವಂಶಿ ರಸ್ತೆ ಗುತ್ತಿಗೆದಾರರಾಗಿದ್ದಾರೆ. ಇಂದು ಬೆಳಗ್ಗೆಯೇ ದಾಳಿ ಮಾಡಿರುವ ಐಟಿ ಅಧಿಕಾರಿಗಳ ತಂಡ, ಅವರ ಆದಾಯ ಮತ್ತು ವ್ಯವಹಾರದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT