ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿ 
ರಾಜ್ಯ

ಕಾರ್ಕಳ ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ಅಕ್ರಮ; ಸಿಐಡಿ ತನಿಖೆಗೆ ಸರ್ಕಾರ ಆದೇಶ

ಕಾರ್ಕಳದ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಓಡಿಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಉಡುಪಿ: ಕಾರ್ಕಳದ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸಿನಂತೆ ಮುಖ್ಯಮಂತ್ರಿ ಈ ಆದೇಶ ಹೊರಡಿಸಿದ್ದಾರೆ.

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು.

ಈ ಹಿನ್ನೆಲೆಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಅವರು ಫೆ.2ರಂದು ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಇದೀಗ ಮುಖ್ಯಮಂತ್ರಿ ಸಿಐಡಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT