ಅಹವಾಲು ಸಲ್ಲಿಸಲು ಸರತಿ ಸಾಲಿನಲ್ಲಿ ನಿಂತಿರುವ ಜನರು. 
ರಾಜ್ಯ

ವಿಧಾನಸೌಧದಲ್ಲಿ ರಾಜ್ಯಮಟ್ಟದ ಜನಸ್ಪಂದನಾ ಕಾರ್ಯಕ್ರಮ; ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಲು ಜನಸಾಗರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ, ಪರಿಹಾರ ಒದಗಿಸುವ 2ನೇ ಹಂತದ 'ಜನಸ್ಪಂದನಾ ಕಾರ್ಯಕ್ರಮ ವಿಧಾನಸೌಧದಲ್ಲಿ ಗುರುವಾರ ಆರಂಭವಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ, ಪರಿಹಾರ ಒದಗಿಸುವ 2ನೇ ಹಂತದ 'ಜನಸ್ಪಂದನಾ ಕಾರ್ಯಕ್ರಮ ವಿಧಾನಸೌಧದಲ್ಲಿ ಗುರುವಾರ ಆರಂಭವಾಗಿದೆ.

ಮುಖ್ಯಮಂತ್ರಿ ಇಂದು ದಿನವಿಡೀ ಜನರಿಂದ, ದೂರು, ಮನವಿಗಳನ್ನು ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದಲೇ ವಿಧಾನ ಸೌಧದ ಎದುರು ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.

ಬೆಳಗ್ಗೆ 10ರಿಂದ ಸಂಜೆ 6ರವರೆಗೂ ಮುಖ್ಯಮಂತ್ರಿಯವರು ಸಾರ್ವಜನಿಕರ ಅಹವಾಲು ಆಲಿಸುವರು. ಇದಕ್ಕಾಗಿ ವಿಧಾನಸೌಧದ ಆವರಣದಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಮಿಯಾನ ಅಳವಡಿಸಿ ಇಲಾಖಾವಾರು ಕೌಂಟರ್ ಗಳ ಸೌಲಭ್ಯ ಕಲ್ಪಿಸಲಾಗಿದೆ. ವಿಧಾನಸೌಧದ ಒಳಭಾಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಜನರ ದೂರು ಮತ್ತು ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. 'ಜನತಾ ದರ್ಶನ'ಕ್ಕೆ ಆಗಮಿಸುವ ನಾಗರಿಕರು ಆಯಾ ಇಲಾಖೆಯ ಸಹಾಯ ಕೇಂದ್ರಕ್ಕೆ ತೆರಳಿ ಅಹವಾಲು ಸಲ್ಲಿಸಬಹುದಾಗಿದೆ.

ಸ್ವಾಗತ ಕೇಂದ್ರ ಮತ್ತು ಮುಖ್ಯಮಂತ್ರಿಯವರ ವೇದಿಕೆಗಳ ಜೊತೆಗೆ ಇಲಾಖಾವಾರು 28 ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಎಲ್ಲ ಇಲಾಖೆಗಳಿಗೂ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT