ಅಹವಾಲು ಸಲ್ಲಿಸಲು ಸರತಿ ಸಾಲಿನಲ್ಲಿ ನಿಂತಿರುವ ಜನರು. 
ರಾಜ್ಯ

ವಿಧಾನಸೌಧದಲ್ಲಿ ರಾಜ್ಯಮಟ್ಟದ ಜನಸ್ಪಂದನಾ ಕಾರ್ಯಕ್ರಮ; ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಲು ಜನಸಾಗರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ, ಪರಿಹಾರ ಒದಗಿಸುವ 2ನೇ ಹಂತದ 'ಜನಸ್ಪಂದನಾ ಕಾರ್ಯಕ್ರಮ ವಿಧಾನಸೌಧದಲ್ಲಿ ಗುರುವಾರ ಆರಂಭವಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ, ಪರಿಹಾರ ಒದಗಿಸುವ 2ನೇ ಹಂತದ 'ಜನಸ್ಪಂದನಾ ಕಾರ್ಯಕ್ರಮ ವಿಧಾನಸೌಧದಲ್ಲಿ ಗುರುವಾರ ಆರಂಭವಾಗಿದೆ.

ಮುಖ್ಯಮಂತ್ರಿ ಇಂದು ದಿನವಿಡೀ ಜನರಿಂದ, ದೂರು, ಮನವಿಗಳನ್ನು ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದಲೇ ವಿಧಾನ ಸೌಧದ ಎದುರು ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.

ಬೆಳಗ್ಗೆ 10ರಿಂದ ಸಂಜೆ 6ರವರೆಗೂ ಮುಖ್ಯಮಂತ್ರಿಯವರು ಸಾರ್ವಜನಿಕರ ಅಹವಾಲು ಆಲಿಸುವರು. ಇದಕ್ಕಾಗಿ ವಿಧಾನಸೌಧದ ಆವರಣದಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಮಿಯಾನ ಅಳವಡಿಸಿ ಇಲಾಖಾವಾರು ಕೌಂಟರ್ ಗಳ ಸೌಲಭ್ಯ ಕಲ್ಪಿಸಲಾಗಿದೆ. ವಿಧಾನಸೌಧದ ಒಳಭಾಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಜನರ ದೂರು ಮತ್ತು ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. 'ಜನತಾ ದರ್ಶನ'ಕ್ಕೆ ಆಗಮಿಸುವ ನಾಗರಿಕರು ಆಯಾ ಇಲಾಖೆಯ ಸಹಾಯ ಕೇಂದ್ರಕ್ಕೆ ತೆರಳಿ ಅಹವಾಲು ಸಲ್ಲಿಸಬಹುದಾಗಿದೆ.

ಸ್ವಾಗತ ಕೇಂದ್ರ ಮತ್ತು ಮುಖ್ಯಮಂತ್ರಿಯವರ ವೇದಿಕೆಗಳ ಜೊತೆಗೆ ಇಲಾಖಾವಾರು 28 ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಎಲ್ಲ ಇಲಾಖೆಗಳಿಗೂ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT