ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: ಕಂಡಕ್ಟರ್ ಮೊಬೈಲ್ ಜಜ್ಜಿ ಹಾಕಿದ ಪತ್ನಿ, ನಿರ್ವಾಹಕನಿಗೆ ಹೊಸ ಫೋನ್ ಕೊಡಿಸಿ ಕ್ಷಮೆ ಕೋರಿದ ಪತಿ!

ಕ್ಷುಲ್ಲಕ ಕಾರಣಕ್ಕೆ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಮೂವರು ಮಹಿಳೆಯರು ಹಲ್ಲೆ ಮಾಡಿ ಮೊಬೈಲ್ ಒಡೆದು ಹಾಕಿರುವ ಘಟನೆ ಹಾಸನ ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಹಾಸನ: ಕ್ಷುಲ್ಲಕ ಕಾರಣಕ್ಕೆ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಮೂವರು ಮಹಿಳೆಯರು ಹಲ್ಲೆ ಮಾಡಿ ಮೊಬೈಲ್ ಒಡೆದು ಹಾಕಿರುವ ಘಟನೆ ಹಾಸನ ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಹಾಸನದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್‌ ಪ್ರಯಾಣಿಕರಿಂದ ಸಂಪೂರ್ಣ ಭರ್ತಿಯಾಗಿದ್ದರೂ ಮೂವರು ಮಹಿಳೆಯರು ಬಸ್ ಹತ್ತಿದ್ದರು. ಈ ವೇಳೆ ಕಂಡಕ್ಟರ್ ಸೀಟ್ ಇಲ್ಲ, ಯಾರಾದರೂ ಇಳಿಯುವವರಿದ್ದರೆ ಬಸ್ ನಿಲ್ದಾಣದಲ್ಲೇ ಇಳಿಯಿರಿ ಎಂದಿದ್ದಾರೆ.

ಬಸ್ ಹೊರಟ ನಂತರ ಮೂವರು ಮಹಿಳೆಯರು ಬಸ್ ನಿಲ್ಲಿಸಿ ಇಳಿಯುತ್ತೇವೆ ಎಂದಿದ್ದಾರೆ. ನಾನು ಅಲ್ಲಿಯೇ ಹೇಳಿದೆ ಹೀಗೇಕೆ ಮಾಡುತ್ತೀರಿ ಮುಂದೆ ನಿಲ್ಲಿಸುತ್ತೇನೆ ಅಲ್ಲಿ ಇಳಿಯಿರಿ ಎಂದು ನಿರ್ವಾಹಕ ಹೇಳಿದ್ದಾರೆ.

ಚಲಿಸುತ್ತಿದ್ದ ಬಸ್‌ನಿಂದಲೇ ಮಹಿಳೆಯರು ಇಳಿಯುವ ಯತ್ನ ಮಾಡಿದಾಗ ಬಸ್ ನಿಲ್ಲಿಸಿದ್ದಾರೆ. ಇದರಿಂದ ಕೆರಳಿದ ಮಹಿಳೆಯರು ಕಂಡಕ್ಟರ್‌ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ. ಇದನ್ನು ತನ್ನ ಮೊಬೈಲ್‌ನಲ್ಲಿ ನಿರ್ವಾಹಕ ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು. ಇದರಿಂದ ಆಕ್ರೋಶಗೊಂಡ ಮಹಿಳೆಯರು ಮೊಬೈಲ್ ಕಸಿದುಕೊಂಡು ಒಡೆದುಹಾಕಿದ್ದಾರೆ‌.

ಈ ವೇಳೆ ಮೂವರು ಮಹಿಳೆಯರು ಹಾಗೂ ಚಾಲಕ, ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ನಿರ್ವಾಹಕ ಪೊಲೀಸರಿಗೆ ಕರೆ ಮಾಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಮೂವರು ಮಹಿಳೆಯರ ವರ್ತನೆ ಬಗ್ಗೆ ಬಸ್‌ನಲ್ಲಿದ್ದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ತಪ್ಪಿನ ಅರಿವಾಗುತ್ತಿದ್ದಂತೆ ನಿರ್ವಾಹಕರಲ್ಲಿ ಕ್ಷಮೆಯಾಚಿಸಿದ್ದಾರೆ. ಆದರೆ ಮೊಬೈಲ್ ಕೊಡಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ವೇಳೆ ಕಂಡಕ್ಟರ್ ದೂರು ಕೊಡಲು ಮುಂದಾಗಿದ್ದು, ಸ್ಥಳಕ್ಕೆ ಆಗಮಿಸಿದ ಹಲ್ಲೆ ನಡೆಸಿದ ಮಹಿಳೆಯೊಬ್ಬರ ಪತಿ ನಿರ್ವಾಹಕನಲ್ಲಿ ಕ್ಷಮೆ ಕೇಳಿ 10 ಸಾವಿರ ರು ಮೌಲ್ಯದ ಹೊಸ ಮೊಬೈಲ್ ಕೊಡಿಸಿ ಪೊಲೀಸ್ ಠಾಣೆಗೆ ದೂರು ನೀಡದಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT