ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: ಕಂಡಕ್ಟರ್ ಮೊಬೈಲ್ ಜಜ್ಜಿ ಹಾಕಿದ ಪತ್ನಿ, ನಿರ್ವಾಹಕನಿಗೆ ಹೊಸ ಫೋನ್ ಕೊಡಿಸಿ ಕ್ಷಮೆ ಕೋರಿದ ಪತಿ!

ಕ್ಷುಲ್ಲಕ ಕಾರಣಕ್ಕೆ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಮೂವರು ಮಹಿಳೆಯರು ಹಲ್ಲೆ ಮಾಡಿ ಮೊಬೈಲ್ ಒಡೆದು ಹಾಕಿರುವ ಘಟನೆ ಹಾಸನ ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಹಾಸನ: ಕ್ಷುಲ್ಲಕ ಕಾರಣಕ್ಕೆ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಮೂವರು ಮಹಿಳೆಯರು ಹಲ್ಲೆ ಮಾಡಿ ಮೊಬೈಲ್ ಒಡೆದು ಹಾಕಿರುವ ಘಟನೆ ಹಾಸನ ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಹಾಸನದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್‌ ಪ್ರಯಾಣಿಕರಿಂದ ಸಂಪೂರ್ಣ ಭರ್ತಿಯಾಗಿದ್ದರೂ ಮೂವರು ಮಹಿಳೆಯರು ಬಸ್ ಹತ್ತಿದ್ದರು. ಈ ವೇಳೆ ಕಂಡಕ್ಟರ್ ಸೀಟ್ ಇಲ್ಲ, ಯಾರಾದರೂ ಇಳಿಯುವವರಿದ್ದರೆ ಬಸ್ ನಿಲ್ದಾಣದಲ್ಲೇ ಇಳಿಯಿರಿ ಎಂದಿದ್ದಾರೆ.

ಬಸ್ ಹೊರಟ ನಂತರ ಮೂವರು ಮಹಿಳೆಯರು ಬಸ್ ನಿಲ್ಲಿಸಿ ಇಳಿಯುತ್ತೇವೆ ಎಂದಿದ್ದಾರೆ. ನಾನು ಅಲ್ಲಿಯೇ ಹೇಳಿದೆ ಹೀಗೇಕೆ ಮಾಡುತ್ತೀರಿ ಮುಂದೆ ನಿಲ್ಲಿಸುತ್ತೇನೆ ಅಲ್ಲಿ ಇಳಿಯಿರಿ ಎಂದು ನಿರ್ವಾಹಕ ಹೇಳಿದ್ದಾರೆ.

ಚಲಿಸುತ್ತಿದ್ದ ಬಸ್‌ನಿಂದಲೇ ಮಹಿಳೆಯರು ಇಳಿಯುವ ಯತ್ನ ಮಾಡಿದಾಗ ಬಸ್ ನಿಲ್ಲಿಸಿದ್ದಾರೆ. ಇದರಿಂದ ಕೆರಳಿದ ಮಹಿಳೆಯರು ಕಂಡಕ್ಟರ್‌ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ. ಇದನ್ನು ತನ್ನ ಮೊಬೈಲ್‌ನಲ್ಲಿ ನಿರ್ವಾಹಕ ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು. ಇದರಿಂದ ಆಕ್ರೋಶಗೊಂಡ ಮಹಿಳೆಯರು ಮೊಬೈಲ್ ಕಸಿದುಕೊಂಡು ಒಡೆದುಹಾಕಿದ್ದಾರೆ‌.

ಈ ವೇಳೆ ಮೂವರು ಮಹಿಳೆಯರು ಹಾಗೂ ಚಾಲಕ, ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ನಿರ್ವಾಹಕ ಪೊಲೀಸರಿಗೆ ಕರೆ ಮಾಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಮೂವರು ಮಹಿಳೆಯರ ವರ್ತನೆ ಬಗ್ಗೆ ಬಸ್‌ನಲ್ಲಿದ್ದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ತಪ್ಪಿನ ಅರಿವಾಗುತ್ತಿದ್ದಂತೆ ನಿರ್ವಾಹಕರಲ್ಲಿ ಕ್ಷಮೆಯಾಚಿಸಿದ್ದಾರೆ. ಆದರೆ ಮೊಬೈಲ್ ಕೊಡಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ವೇಳೆ ಕಂಡಕ್ಟರ್ ದೂರು ಕೊಡಲು ಮುಂದಾಗಿದ್ದು, ಸ್ಥಳಕ್ಕೆ ಆಗಮಿಸಿದ ಹಲ್ಲೆ ನಡೆಸಿದ ಮಹಿಳೆಯೊಬ್ಬರ ಪತಿ ನಿರ್ವಾಹಕನಲ್ಲಿ ಕ್ಷಮೆ ಕೇಳಿ 10 ಸಾವಿರ ರು ಮೌಲ್ಯದ ಹೊಸ ಮೊಬೈಲ್ ಕೊಡಿಸಿ ಪೊಲೀಸ್ ಠಾಣೆಗೆ ದೂರು ನೀಡದಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT