ಶಾಸಕ ಹರೀಶ್ ಪೂಂಜಾ (ಸಂಗ್ರಹ ಚಿತ್ರ) 
ರಾಜ್ಯ

'ಹಿಂದೂಗಳ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಬಳಕೆಯಾಗಲಿ': ಶಾಸಕ ಹರೀಶ್ ಪೂಂಜಾ ಪೋಸ್ಟ್!

ಕೇಂದ್ರದ ಮೋದಿ ಸರ್ಕಾರದ ವಿರುದ್ಧದ ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ 'ನನ್ನ ತೆರಿಗೆ... ನನ್ನ ಹಕ್ಕು' ವಿಚಾರ ಹಸಿರಾಗಿರುವಂತೆಯೇ ಇತ್ತ ರಾಜ್ಯದ ಬಿಜೆಪಿ ಶಾಸಕರೊಬ್ಬರು ಹಿಂದೂಗಳ ತೆರಿಗೆ.. ಹಿಂದೂಗಳ ಹಕ್ಕು ಎಂಬ ಹೊಸ ವಾದದ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.

ದಕ್ಷಿಣ ಕನ್ನಡ: ಕೇಂದ್ರದ ಮೋದಿ ಸರ್ಕಾರದ (Modi Govt) ವಿರುದ್ಧದ ರಾಜ್ಯದ ಕಾಂಗ್ರೆಸ್ ಸರ್ಕಾರ (Congress Govt) ನಡೆಸುತ್ತಿರುವ 'ನನ್ನ ತೆರಿಗೆ... ನನ್ನ ಹಕ್ಕು' ವಿಚಾರ ಹಸಿರಾಗಿರುವಂತೆಯೇ ಇತ್ತ ರಾಜ್ಯದ ಬಿಜೆಪಿ ಶಾಸಕರೊಬ್ಬರು ಹಿಂದೂಗಳ ತೆರಿಗೆ.. ಹಿಂದೂಗಳ ಹಕ್ಕು ಎಂಬ ಹೊಸ ವಾದದ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.

ಹೌದು.. ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು (Hindus Right ) ಹಿಂದೂಗಳ ಹಣ ಹಿಂದೂ ಅಭಿವೃದ್ಧಿಗೆ (Hindus Development) ಮಾತ್ರ ಬಳಸಬೇಕು. ಹಿಂದೂಗಳು ಕಟ್ಟಿದ ತೆರಿಗೆ ಹಣ ಇತರ ಧರ್ಮದ ಜನರಿಗೆ ಸೇರುವುದು ಅನ್ಯಾಯ ಎಂದು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್​ ಪೂಂಜಾ (BJP MLA Harish Poonja) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. 

'ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದುಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ. ಹಿಂದೂಗಳ ತೆರಿಗೆ, ಹಿಂದೂಗಳ ಹಕ್ಕು. ದೇಶದಲ್ಲಿರುವ ತೆರಿಗೆ ಸಂಗ್ರಹಣದಲ್ಲಿ ಹಿಂದೂಗಳ ಪಾಲು ಎಷ್ಟು? ಇದರಲ್ಲಿ ಹಿಂದೂಗಳ ಅಭಿವೃದ್ಧಿಗೆ ಉಪಯೋಗವಾಗುತ್ತಿರುವುದು ಎಷ್ಟು? ಹಿಂದೂಗಳ ತೆರಿಗೆ ಹಿಂದುಗಳಿಗೆ ಸಲ್ಲಬೇಕು' ಎಂದು ಹರೀಶ್ ಪೂಂಜಾ ಪೋಸ್ಟ್ ಮಾಡಿದ್ದಾರೆ.

ಪೋಸ್ಟ್ ಸಮರ್ಥಿಸಿಕೊಂಡ ಶಾಸಕ
ಇನ್ನು ಮಂಗಳೂರಿನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಪೂಂಜಾ ತಮ್ಮ ಪೋಸ್ಟ್ ಅನ್ನು ಸಮರ್ಥಿಸಿಕೊಂಡರು. 'ಹಿಂದೂಗಳ ತೆರಿಗೆ ಹಣವನ್ನು ಹಿಂದೂಗಳ ಅಭಿವೃದ್ಧಿಗೆ ವಿನಿಯೋಗಿಸಲು ಕೇಳುವುದರಲ್ಲಿ ತಪ್ಪೇನಿದೆ. ಡಿ ಕೆ ಸುರೇಶ್ (ಕಾಂಗ್ರೆಸ್ ಸಂಸದ) ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ನಾನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದೆ. ಕಾಂಗ್ರೆಸ್ ಉತ್ತರ ಮತ್ತು ದಕ್ಷಿಣ ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ. ಪ್ರತಿಯೊಬ್ಬ ಹಿಂದೂಗಳ ಹೆಸರಿನಲ್ಲಿ ಧರ್ಮವನ್ನು ನಮೂದಿಸಿರುವುದರಿಂದ ಹಿಂದೂಗಳ ತೆರಿಗೆ ಹಣವನ್ನು ಲೆಕ್ಕಾಚಾರ ಮಾಡುವುದು ಕಷ್ಟವೇನಲ್ಲ. ತೆರಿಗೆ ವಿಷಯ ಒಂದು ಸಣ್ಣ ವಿಷಯ. ಆದರೆ ಕಾಂಗ್ರೆಸ್ ಈ ವಿಷಯವನ್ನು ಬಳಸಿಕೊಂಡು ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ' ಎಂದರು.

ಕಾಂಗ್ರೆಸ್ ಖಂಡನೆ
ಶಾಸಕ ಹರೀಶ್ ಪೂಂಜಾ ಪೋಸ್ಟ್​ಗೆ ವ್ಯಾಪಕ‌ ಖಂಡನೆ ವ್ಯಕ್ತವಾಗುತ್ತಿದ್ದು, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ಎಂ.ಬಿ ಪಾಟೀಲ್, ಇದು ಮೂರ್ಖತನದ ಪರಮಾವಧಿ. ನಮ್ಮ ದೇಶದ ಸಂವಿಧಾನ ಬೆಳ್ತಂಗಡಿ ಶಾಸಕರಿಗೆ ಗೊತ್ತಿಲ್ಲಾ ಅನಿಸುತ್ತೆ. ಶಾಸಕರಾಗೋಕೆ ಅವರು ಅರ್ಹರಿಲ್ಲ ಎಂದಿದ್ದಾರೆ.

ಅಂತೆಯೇ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಶುಕ್ರವಾರ ವಾಗ್ದಾಳಿ ನಡೆಸಿದ್ದು, 'ಅವರ ಪೋಸ್ಟ್‌ನ ಉದ್ದೇಶ ರಾಜ್ಯಕ್ಕೆ ಅನ್ಯಾಯ ಆಗ್ತಿದೆ ಎನ್ನೋದು ಇಲ್ಲ. ನಮ್ಮ ವಾದದಲ್ಲಿ ಸತ್ಯಾಂಶ ಇದ್ದರೆ ಹರೀಶ್ ಪೂಂಜಾ ಒಪ್ಪಿಕೊಳ್ಳಬೇಕು. ಮೊಂಡುವಾದ ಪ್ರದರ್ಶನ ಮಾಡಬಾರದು. 10 ವರ್ಷದಿಂದ ಅದೇ ಪ್ರಮಾಣದಲ್ಲಿ ಹಣ ಬರುತ್ತಿದೆ, ರಾಜ್ಯಕ್ಕೆ ನೀಡುವ ಅನುದಾನದಲ್ಲಿ ಏನೂ ವೃದ್ಧಿಯಾಗಿಲ್ಲ. ಧರ್ಮದ ಹೆಸರಿನಲ್ಲಿ ಅನ್ಯಾಯದ ಕೆಲಸವನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಯ ಬಂಧನ, ವಿರೋಧ ಪಕ್ಷದ ಬಂಧನ ವಾಗುತ್ತಿದೆ. ತನಿಖಾ ಸಂಸ್ಥೆಗಳು ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ. ಚಂಡೀಗಢ ಮೇಯರ್ ಚುನಾವಣೆ ಈ ಘಟನೆಗಳಿಗೆ ಸಾಕ್ಷಿ. ದೇಶದಲ್ಲಿ ಪ್ರಜಾ ಪ್ರಭುತ್ವ ಮೌಲ್ಯ ಕುಸಿಯುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT